Featured

ಅಂಚೆ ನೌಕರರ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ವಿನಯ್ ಕುಮಾರ್ ಸೊರಕೆ ಬೆಂಬಲ – Vishwanews24

ಅಂಚೆ ನೌಕರರ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ವಿನಯ್ ಕುಮಾರ್ ಸೊರಕೆ ಬೆಂಬಲ

ಅ0ಚೆ ನೌಕರರ ಕೇಂದ್ರ ಸಂಘಟನೆಗಳ, ಜಂಟಿಕ್ರಿಯೆ ಸಮಿತಿ ನವ ದೆಹಲಿ ಇದರ ರಾಷ್ಟç ವ್ಯಾಪಿ ಮುಷ್ಕರದ ಕರೆಯನ್ವಯ,ಉಡುಪಿ ಅಂಚೆ ವಿಭಾಗದಲ್ಲಿಯೂ ಮಾರ್ಚ್೨೮ ಮತ್ತು೨೯ರಂದು ಉಡುಪಿಯ ೨೬೦ ಅಂಚೆಕಛೇರಿಗಳು ಬಾಗಿಲು ಮುಚ್ಚಿ ಪ್ರತಿಭಟನೆ ನಡೆಸಿದವು.

ಉಡುಪಿಯ ೮೫೦ಕ್ಕೂ ಮಿಕ್ಕಿ ಅಂಚೆ ಹಾಗೂ ಗ್ರಾಮೀಣ ಅಂಚೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡು ಉಡುಪಿಯ ಪ್ರಧಾನ ಅಂಚೆ ಕಛೇರಿಯ ಸಮೀಪ ಮುಷ್ಕರದ ಸಭೆಯನ್ನು ನಡೆಸಿದರು. ಈ ಮುಷ್ಕರದ ಸಭೆಗೆ ಮಾಜಿ ರಾಜ್ಯ ಸಚಿವ,ಮಾಜಿ ಸಂಸದ,ಕಾ0ಗ್ರೆಸ್‌ನ ಹಿರಿಯ ನೇತಾರ ಶ್ರೀ ವಿನಯ್ ಕುಮಾರ್ ಸೊರಕೆ ,ಮಾಚ್ ೨೯ರಂದು ಭೇಟಿ ನೀಡಿ,ನೌಕರರ ಬೇಡಿಕೆಗಳನ್ನು ಆಲಿಸಿದರು.

ನೌಕರರಿಂದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠಾವಂತ ನೌಕರರನ್ನು ಹೊಂದಿರುವ ಭಾರತೀಯ ಅಂಚೆ ಇಲಾಖೆ, ಜಗತ್ತಿನಲ್ಲಿಯೇ ಪ್ರಮುಖ ಸ್ಥಾನಮಾನವನ್ನು ಹೊಂದಿದೆ. ಇಂತಹ ಇಲಾಖೆಯನ್ನು ಸೇರಿ ೩೪ ವಿವಿಧ ಸರಕಾರಿ ಇಲಾಖೆ ಗಳನ್ನು ಇಂದು ಕೇಂದ್ರ ಸರಕಾರ ಖಾಸಗೀಕರಣಗೊಳಿಸುವತ್ತ ಮುಖ ಮಾಡಿದೆ. ಇದರ ವಿರುದ್ಧ ರಾಷ್ಟಾçದ್ಯಂತ ನಡೆಯುತ್ತಿರುವ ಅಂಚೆ ನೌಕರರ ಹೋರಾಟಕ್ಕೆ ನನ್ನ ಬೆಂಬಲ ಇದೆ.

ಖಾಸಗೀಕರಣದ ಬದಲು ಇಲಾಖೆಯನ್ನು ಲಾಭದಾಯಕ ಇಲಾಖೆಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸುವಂತೆ ಆ ಮೂಲಕ ಈ ಸರಕಾರಿ ಇಲಾಖೆಯನ್ನು ಉಳಿಸಿಕೊಳ್ಳುವಂತೆ ಲೋಕ ಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಧ್ವನಿ ಎತ್ತುವಂತೆ ರಾಷ್ಟಿçÃಯ ಕಾಂಗ್ರೇಸ್ ನಾಯಕರುಗಳಾದ ಶ್ರೀ ಮಲ್ಲಕಾರ್ಜುನ ಖರ್ಗೆ ಹಾಗೂ ವಿರೊಧ ಪಕ್ಷದ ಅಧ್ಯಕ್ಷರಾದ ಶ್ರೀ ಚೌಧರಿಯವರಲ್ಲಿಯೂ ಮಾತನಾಡುವ ಭರವಸೆಯನ್ನು ನೀಡಿದರು. ಕೇಂದ್ರ ಸರಕಾರ ತನ್ನ ಕಣ್ಣು ಕಿವಿ ತೆರೆದು ಅಂಚೆ ನೌಕರರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಕೂಡ ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಂಟಿ ಕ್ರಿಯೆ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಜತ್ತನ್,ಸಂಚಾಲಕರಾದ ಸುಹಾಸ,ಜಂಟಿ ಸಂಚಾಲಕರಾದ ಶ್ರೀ ಸುರೇಶ್ ಕೆ, ಎಚ್.ಕೆ ಭಾಸ್ಕರ ಶೆಟ್ಟಿ, ಬಿ.ವಿಜಯ ನಾಯಿರಿ, ಪಧಾಧಿಕಾರಿಗಳಾದ ಸುಭಾಶ್ ತಿಂಗಳಾಯ, ಕಳತ್ತೂರು ದಿವಾಕರ ಬಿ.ಶೆಟ್ಟಿ, ಉಮೇಶ್ ನಾಯಕ್, ಮಾಧವ ಅಡಿಗ, ಸಿ.ಕೆ.ನಾರಾಯಣ್, ಬಸವ ಬಿಲ್ಲವ, ಸುರೇಶ್ ಶೇರಿಗಾರ್, ಜನಾರ್ಧನ್, ಎನ್.ಎ ನೇಜಾರ್, ಮತ್ತಿತರು ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago