Featured

ಅಂಚೆ ಸೇವಕರ ಪ್ರತಿಭಟನೆಗೆ ಕೇಂದ್ರದ ಸ್ಪಂದನೆ, ನಾಲ್ಕು ಪಟ್ಟು ಸಂಬಳ ಏರಿಸಿದ ಮೋದಿ ಸರ್ಕಾರ..

ಕಳೆದ ಹಲವಾರು ದಿನಗಳಿಂದ ಅಂಚೆ ಡಾಕ್ ಸೇವಕರು ನಡೆಸುತ್ತಿದ್ದ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ‌. ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮೀಣ ಅಂಚೆ ಸೇವಕರು ಕಳೆ ಹಲವಾರು ದಿನಗಳಿಂದ ರಾಷ್ಟ್ರಾದ್ಯಂತ ಪ್ರತಿಭಟಿಸುತ್ತಿದ್ದರು. ಪ್ರತಿಭಟನೆಗೆ ಸ್ಪಂದಿಸಿರುವ ಮೋದಿ ಸರ್ಕಾರ ಮೂಲ ವೇತನವನ್ನು ಭರ್ಜರಿ ಪ್ರಮಾಣದಲ್ಲಿ ಏರಿಸಿದೆ. ವೇತನ ಏರಿಕೆ ಜೊತೆ ಅಂಚೆ ಸೇವಕರ ಹಲವಾರು ಬೇಡಿಕೆಗಳಿಗೂ ಕೇಂದ್ರ ಸಂಪುಟ ಸಭೆ ಅಸ್ತು ಎಂದಿದೆ.

ನಿನ್ನೇ ನಡೆದಂತಹ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮೀಣ ಅಂಚೆ ಸೇವಕರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ನಿರ್ಧಾರದ ಅನ್ವಯ ಗ್ರಾಮೀಣ ಡಾಕ್ ಸೇವಕರ ವೇತನ ನಾಲ್ಕು ಪಟ್ಟು ಹೆಚ್ಚಳವಾದಂತಾಗಿದೆ. ಇದುವರೆಗೆ ಮಾಸಿಕ 2,295 ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು ಮುಂದೆ ಹತ್ತು ಸಾವಿರ ರುಪಾಯಿ ನೀಡಲಾಗುವುದು. ಹಾಗೆಯೇ ಮಾಸಿಕ 2,775 ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು ಮುಂದೆ 12,500 ರೂಪಾಯಿ ವೇತನ ಸಿಗಲಿದೆ. ಜೊತೆಗೆ 4,115 ಮಾಸಿಕ ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು 14,500 ರಷ್ಟು ವೇತನ ಸಿಗಲಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಷ್ಟ್ರಾದ್ಯಂತ ಇರುವ ಸುಮಾರು ಮೂರು ಲಕ್ಷ ಜನ ಗ್ರಾಮೀಣ ಅಂಚೆ ಸೇವಕರಿಗೆ ಉಪಯೋಗವಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದಂತೆ ಪ್ರತಿಯೊಬ್ಬ ಸೇವಕನಿಗೂ ಸುಮಾರು ಒಂದೂವರೆ ಲಕ್ಷ ರೂಪಾಯಿಯಷ್ಟು ಹಿಂಬಾಕಿ ಹಣ ಕೂಡ ಸಿಗಲಿದೆ. ಸರ್ಕಾರದ ಬೊಕ್ಕಸಕ್ಕೆ ಈ ನಿರ್ಧಾರದಿಂದ ಎರಡೂವರೆ ಸಾವಿರ ಕೋಟಿಯಷ್ಟು ಹೊರೆ ಬೀಳಲಿದೆ. ಕೇವಲ ವೇತನ ಹೆಚ್ಚಳ ಅಷ್ಟೇ ಅಲ್ಲದೆ ವೇತನದ ಜೊತೆಗೆ ಅಪಾಯ ಮತ್ತು ಶ್ರಮ ಭತ್ಯೆ, ಮೂರು ಪಾಳಿಯ ಬದಲಾಗಿ ಎರಡು ಪಾಳಿ ಕೆಲಸ ಸೇರಿದಂತೆ ಹಲವು ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿದೆ. ಈ ಮೂಲಕ ಮೋದಿ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿದ್ದು ದೇಶಾದ್ಯಂತ ಲಕ್ಷಾಂತರ ಅಂಚೆ ಸೇವಕರು ಸಂಭ್ರಮಾಚರಣೆಯಲ್ಲಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

19 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

19 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

20 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

21 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

22 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

22 hours ago