Featured

ಅಂಚೆ ಸೇವಕರ ಪ್ರತಿಭಟನೆಗೆ ಕೇಂದ್ರದ ಸ್ಪಂದನೆ, ನಾಲ್ಕು ಪಟ್ಟು ಸಂಬಳ ಏರಿಸಿದ ಮೋದಿ ಸರ್ಕಾರ..

ಕಳೆದ ಹಲವಾರು ದಿನಗಳಿಂದ ಅಂಚೆ ಡಾಕ್ ಸೇವಕರು ನಡೆಸುತ್ತಿದ್ದ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ‌. ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮೀಣ ಅಂಚೆ ಸೇವಕರು ಕಳೆ ಹಲವಾರು ದಿನಗಳಿಂದ ರಾಷ್ಟ್ರಾದ್ಯಂತ ಪ್ರತಿಭಟಿಸುತ್ತಿದ್ದರು. ಪ್ರತಿಭಟನೆಗೆ ಸ್ಪಂದಿಸಿರುವ ಮೋದಿ ಸರ್ಕಾರ ಮೂಲ ವೇತನವನ್ನು ಭರ್ಜರಿ ಪ್ರಮಾಣದಲ್ಲಿ ಏರಿಸಿದೆ. ವೇತನ ಏರಿಕೆ ಜೊತೆ ಅಂಚೆ ಸೇವಕರ ಹಲವಾರು ಬೇಡಿಕೆಗಳಿಗೂ ಕೇಂದ್ರ ಸಂಪುಟ ಸಭೆ ಅಸ್ತು ಎಂದಿದೆ.

ನಿನ್ನೇ ನಡೆದಂತಹ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮೀಣ ಅಂಚೆ ಸೇವಕರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ನಿರ್ಧಾರದ ಅನ್ವಯ ಗ್ರಾಮೀಣ ಡಾಕ್ ಸೇವಕರ ವೇತನ ನಾಲ್ಕು ಪಟ್ಟು ಹೆಚ್ಚಳವಾದಂತಾಗಿದೆ. ಇದುವರೆಗೆ ಮಾಸಿಕ 2,295 ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು ಮುಂದೆ ಹತ್ತು ಸಾವಿರ ರುಪಾಯಿ ನೀಡಲಾಗುವುದು. ಹಾಗೆಯೇ ಮಾಸಿಕ 2,775 ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು ಮುಂದೆ 12,500 ರೂಪಾಯಿ ವೇತನ ಸಿಗಲಿದೆ. ಜೊತೆಗೆ 4,115 ಮಾಸಿಕ ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು 14,500 ರಷ್ಟು ವೇತನ ಸಿಗಲಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಷ್ಟ್ರಾದ್ಯಂತ ಇರುವ ಸುಮಾರು ಮೂರು ಲಕ್ಷ ಜನ ಗ್ರಾಮೀಣ ಅಂಚೆ ಸೇವಕರಿಗೆ ಉಪಯೋಗವಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದಂತೆ ಪ್ರತಿಯೊಬ್ಬ ಸೇವಕನಿಗೂ ಸುಮಾರು ಒಂದೂವರೆ ಲಕ್ಷ ರೂಪಾಯಿಯಷ್ಟು ಹಿಂಬಾಕಿ ಹಣ ಕೂಡ ಸಿಗಲಿದೆ. ಸರ್ಕಾರದ ಬೊಕ್ಕಸಕ್ಕೆ ಈ ನಿರ್ಧಾರದಿಂದ ಎರಡೂವರೆ ಸಾವಿರ ಕೋಟಿಯಷ್ಟು ಹೊರೆ ಬೀಳಲಿದೆ. ಕೇವಲ ವೇತನ ಹೆಚ್ಚಳ ಅಷ್ಟೇ ಅಲ್ಲದೆ ವೇತನದ ಜೊತೆಗೆ ಅಪಾಯ ಮತ್ತು ಶ್ರಮ ಭತ್ಯೆ, ಮೂರು ಪಾಳಿಯ ಬದಲಾಗಿ ಎರಡು ಪಾಳಿ ಕೆಲಸ ಸೇರಿದಂತೆ ಹಲವು ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿದೆ. ಈ ಮೂಲಕ ಮೋದಿ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿದ್ದು ದೇಶಾದ್ಯಂತ ಲಕ್ಷಾಂತರ ಅಂಚೆ ಸೇವಕರು ಸಂಭ್ರಮಾಚರಣೆಯಲ್ಲಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago