Featured

ಅಂತರಾಷ್ಟ್ರೀಯ ವಿಮಾನ ಹಾರಾಟದ ಮೇಲಿನ ನಿರ್ಬಂಧ ಡಿ.31ರವರೆಗೆ ವಿಸ್ತರಣೆ -Vishwanews24

ಅಂತರಾಷ್ಟ್ರೀಯ ವಿಮಾನ ಹಾರಾಟದ ಮೇಲಿನ ನಿರ್ಬಂಧ ಡಿ.31ರವರೆಗೆ ವಿಸ್ತರಣೆ -Vishwanews24

ನವದೆಹಲಿ, : ವಿಶ್ವದ ಕೆಲವೆಡೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಡಿ.31ರ ತನಕ ವಿಸ್ತರಿಸಿದೆ.

“ಕಾರ್ಗೊ ವಿಮಾನಗಳ ಹಾರಾಟಕ್ಕೆ ಹಾಗೂ ಮಹಾನಿರ್ದೇಶನಾಲಯದ ಅನುಮತಿ ಪಡೆದಂತ ಇತರ ವಿಮಾನಗಳ ಹಾರಾಟಕ್ಕೆ ಈ ನಿರ್ಬಂಧ ಅನ್ವಯಿಸುವುದಿಲ್ಲ” ಎಂದು ತಿಳಿಸಿದೆ.

“ಆಯಾಯ ಪ್ರಕರಣಗಳನ್ನು ಆಧರಿಸಿ ನಿರ್ದಿಷ್ಟ ಪ್ರಾಧಿಕಾರಗಳು ಸೀಮಿತ ಮಾರ್ಗಗಳಲ್ಲಿ ಅಂತರಾಷ್ಟ್ರೀಯ ವಿಮಾನ ಸೇವೆಗಳನ್ನು ಅನುಮತಿಸಬಹುದಾಗಿದೆ” ಎಂದು ಡಿಜಿಸಿಎ ತಿಳಿಸಿದೆ.

ಕೊರೊನಾ ಹಿನ್ನೆಲೆ ಮಾರ್ಚ್‌ 23ರಿಂದ ಭಾರತದಲ್ಲಿ ಅಂತರಾಷ್ಟ್ರೀಯ ವಿಮಾನಗಳ ಸೇವೆಗಳ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಮೇ ತಿಂಗಳ ಬಳಿಕ ಕೆಲವೊಂದು ವಿಶೇಷ ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಜುಲೈನಿಂದ ಆಯ್ದ ದೇಶಗಳೊಂದಿಗೆ ಭಾರತ ಏರ್‌‌ ಬಬಲ್‌‌‌‌ ವ್ಯವಸ್ಥೆ ಹೊಂದಿದ್ದ ವಿಮಾನ ಹಾರಾಟಕ್ಕೆ ಅನುಮತಿ ದೊರಕಿತ್ತು.

ಕೊರೊನಾ ಪರಿಸ್ಥಿತಿಯ ಎರಡು ತಿಂಗಳ ಅಂತರದ ಬಳಿಕ ಮೇ 25ರಿಂದ ಭಾರತದಲ್ಲಿ ದೇಶೀಯ ವಿಮಾನ ಸೇವೆಗಳು ಪುನರಾರಂಭಗೊಂಡವು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago