ದಕ್ಷಿಣ ಕನ್ನಡ

ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ .

ಕೊಲೆಯತ್ನ ಜಾನುವಾರು ಕಳ್ಳತನ ಮುಂತಾದ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದ ,ಸುಮಾರು 10 ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೇ ತಪ್ಪಿಸಿಕೊಂಡಿದ್ದ ಬಂಟ್ವಾಳ ತಾಲೂಕು ಪುದು ಗ್ರಾಮದ ಅಮ್ಮೆಮಾರ್ ಇಮ್ರಾನ್ @ಕುಟ್ಟ (24), ತಂದೆ:ದಿ/ ಅಬೂಬಕ್ಕರ್ ಎಂಬಾತನನ್ನು ದನ ಕಳವು ಮಾಡಲು ಉಪಯೋಗಿಸಿದ ಮಾರುತಿ ಓಮ್ನಿ ಕೆ 19 ಎಂಸಿ 6252 ಸಮೇತ ಈ ದಿನ ಖಚಿತ ವರ್ತಮಾನದ ಮೇರೆಗೆ ಆರ್ಕುಳ ಗೇಟ್ ಬಳಿ ಮಂಗಳೂರು ದಕ್ಷಿಣ ಎ.ಸಿ.ಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
25 ಪ್ರಕರಣ ವಿವರ: ಆರೋಪಿ ಇಮ್ರಾನ್ ಮೇಲೆ ಸುಮಾರು 25 ಜಾನುವಾರು ಕಳ್ಳತನ ಪ್ರಕರಣಗಳು ನಗರದ ವಿವಿಧ ಠಾಣೆಗಳಲ್ಲಿ ಮತ್ತು ಕೊಡಗು ಜಿಲ್ಲೆಯಲ್ಲಿ ದಾಖಲಾಗಿರುತ್ತದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿ 3 ಜಾನುವಾರು ಕಳ್ಳತನ ಪ್ರಕರಣ , ಬಜ್ಪೆ ಠಾಣೆಯಲ್ಲಿ ಒಂದು ಜಾನುವಾರು ಕಳ್ಳತನ ಪ್ರಕರಣ , ಕೊಣಾಜೆ ಠಾಣಾ ಸರಹದ್ದಿನಲ್ಲಿ 3 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು, ಬಂಟ್ವಾಳ ಠಾಣಾ ಸರಹದ್ದಿನಲ್ಲಿ 8 ಪ್ರಕರಣದಲ್ಲಿ ದಾಖಲಾಗಿರುತ್ತದೆ. 2017 ರಲ್ಲಿ ಕೊಡಗು ಜಿಲ್ಲೆಯಲ್ಲಿ ಈತನ ವಿರುದ್ದ 7 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಇದರಲ್ಲಿ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಜಾನುವಾರು ಕಳ್ಳತನ ಸಮಯ 2 ಕೊಲೆಯತ್ನ ಪ್ರಕರಣ ಮತ್ತು ಒಂದು ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ 3 ಜಾನುವಾರು ಕಳ್ಳತನ ಪ್ರಕರಣ ಮತ್ತು ಸೋಮವಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಜಾನುವಾರು ಕಳ್ಳತನ ಪ್ರಕರಣವು ದಾಖಲಾಗಿರುತ್ತದೆ.ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಈತನ ವಿರುದ್ದ 2 ಪ್ರಕರಣ ದಾಖಲಾಗಿರುತ್ತದೆ. ಲಾರಿ ಚಾಲಕನ ಕೊಲೆ ಮತ್ತು ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಈ ಮೇಲಿನ ಪ್ರಕರಣಗಳಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ 3 ಜಾನುವಾರು ಕಳ್ಳತನ ಪ್ರಕರಣ ಮತ್ತು ಕೊಡಗು ಜಿಲ್ಲೆಯ 7 ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯು ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದನು .ಸುಮಾರು ಒಂದು ತಿಂಗಳ ಹಿಂದೆ ಈತನ ಸಹಚರನಾದ ನಿಝಾಮ್ ಎಂಬಾತನನ್ನು ರೌಡಿ ನಿಗ್ರಹ ದಳದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ
ಈ ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಟಿ.ಆರ್ ಸುರೇಶ್ ಐಪಿಎಸ್ ರವರ ಆದೇಶದಂತೆ ಮಾನ್ಯ ಡಿಸಿಪಿಯವರಾದ ಹನುಮಂತರಾಯ.ಐಪಿಎಸ್ ಮತ್ತು ಶ್ರೀಮತಿ.ಉಮಾ ಪ್ರಶಾಂತರವರ ನಿರ್ದೇಶನದಂತೆ, ದಕ್ಷಿಣ ರೌಡಿ ನಿಗ್ರಹದಳದ ಎಸಿಪಿ ರಾಮರಾವ್ ಮತ್ತು ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಹಾಗು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago