ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹೇರಲಾಗಿದ್ದ ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧವನ್ನು ತೆರವು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಶನಿವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದು, ‘ಅನ್ ಲಾಕ್ 3″ ಗಾಗಿ ಕೇಂದ್ರ ಮಾರ್ಗಸೂಚಿಗಳ ಅಡಿಯಲ್ಲಿ ಅಥವಾ ಕೊರೋನಾ ವೈರಸ್ ಲಾಕ್ಡೌನ್ ಅನ್ನು ಸರಾಗಗೊಳಿಸುವ ಮೂರನೇ ಹಂತದ ಅಡಿಯಲ್ಲಿ, ಅಂತರ್ ರಾಜ್ಯ ಅಥವಾ ರಾಜ್ಯದೊಳಗಿನ ಯಾವುದೇ ಜನರು ಅಥವಾ ಸರಕುಗಳ ಪ್ರಯಾಣಕ್ಕೆ ನಿರ್ಬಂಧಗಳಿಲ್ಲ. ಕೂಡಲೇ ಈ ನಿರ್ಬಂಧ ಸಡಿಲಗೊಳಿಸಿ. ವ್ಯಕ್ತಿಗಳು ಅಥವಾ ಸರಕುಗಳ ಚಲನೆಗೆ ಪ್ರತ್ಯೇಕ ಅನುಮತಿ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ ಎಂದು ತಿಳಿಸಿದೆ.
ಅಂತೆಯೇ ಇಂತಹ ನಿರ್ಬಂಧಗಳನ್ನು ನಿರಂತರವಾಗಿ ಹೇರುವುದು ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಹೊರಡಿಸಲಾದ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಯಾವುದಾದರೂ ಸಂಚಾರ ನಿರ್ಬಂಧಗಳಿದ್ದರೆ ತೆಗೆದು ಹಾಕಿ ಮತ್ತು ಗೃಹ ಸಚಿವಾಲಯದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಭಲ್ಲಾ ಅವರು ತಮ್ಮ ಪತ್ರದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒತ್ತಾಯಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…