Featured

ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧ ತೆರವಿಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ -Vishwanews24

ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧ ತೆರವಿಗೆ ರಾಜ್ಯಗಳಿಗೆ ಕೇಂದ್ರ ಸೂಚನೆ -Vishwanews24

ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹೇರಲಾಗಿದ್ದ ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧವನ್ನು ತೆರವು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಈ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಶನಿವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದು, ‘ಅನ್ ಲಾಕ್ 3″ ಗಾಗಿ ಕೇಂದ್ರ ಮಾರ್ಗಸೂಚಿಗಳ ಅಡಿಯಲ್ಲಿ ಅಥವಾ ಕೊರೋನಾ ವೈರಸ್ ಲಾಕ್ಡೌನ್ ಅನ್ನು ಸರಾಗಗೊಳಿಸುವ ಮೂರನೇ  ಹಂತದ ಅಡಿಯಲ್ಲಿ, ಅಂತರ್ ರಾಜ್ಯ ಅಥವಾ ರಾಜ್ಯದೊಳಗಿನ ಯಾವುದೇ ಜನರು ಅಥವಾ ಸರಕುಗಳ ಪ್ರಯಾಣಕ್ಕೆ ನಿರ್ಬಂಧಗಳಿಲ್ಲ. ಕೂಡಲೇ ಈ ನಿರ್ಬಂಧ ಸಡಿಲಗೊಳಿಸಿ. ವ್ಯಕ್ತಿಗಳು ಅಥವಾ ಸರಕುಗಳ ಚಲನೆಗೆ ಪ್ರತ್ಯೇಕ ಅನುಮತಿ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ ಎಂದು ತಿಳಿಸಿದೆ.

ಅಂತರ್ ರಾಜ್ಯ ಪ್ರಯಾಣ ನಿರ್ಬಂಧ ಕುರಿತಂತೆ ಕೆಲ ರಾಜ್ಯಸರ್ಕಾರಗಳ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಗೃಹ ಇಲಾಖೆ, ‘ಹಲವಾರು ರಾಜ್ಯಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂತಹ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ ಎಂಬ ವರದಿಗಳಿವೆ. ಈ ನಿರ್ಬಂಧಗಳು ಪೂರೈಕೆ ಸರಪಳಿಗಳ  ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ ಮತ್ತು ಆ ಮೂಲಕ ಆರ್ಥಿಕ ಚಟುವಟಿಕೆ ಮತ್ತು ಉದ್ಯೋಗಕ್ಕೆ ಅಡ್ಡಿಪಡಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಂತೆಯೇ ಇಂತಹ ನಿರ್ಬಂಧಗಳನ್ನು ನಿರಂತರವಾಗಿ ಹೇರುವುದು ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಹೊರಡಿಸಲಾದ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಯಾವುದಾದರೂ ಸಂಚಾರ ನಿರ್ಬಂಧಗಳಿದ್ದರೆ ತೆಗೆದು ಹಾಕಿ ಮತ್ತು ಗೃಹ  ಸಚಿವಾಲಯದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು  ಎಂದು ಭಲ್ಲಾ ಅವರು ತಮ್ಮ ಪತ್ರದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago