ಬೆಂಗಳೂರು:“ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ, ಇಂತಹ 10 ಸಿಡಿಗಳು ಬಂದರೂ ಎದುರಿಸಲು ಸಿದ್ಧನಿದ್ದೇನೆ ಇನ್ನು ನಮ್ಮ ಆಟ ಪ್ರಾರಂಭವಾಗಲಿದ್ದು, ಇದರ ಹಿಂದಿನ ಮಹಾನಾಯಕ ಯಾರೆಂದು ಶೀಘ್ರದಲ್ಲೇ ಬಹಿರಂಗವಾಗಲಿದೆ” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿಯಲ್ಲಿರುವ ಯುವತಿ ನೀಡಿದ ಲಿಖಿತ ದೂರಿಗೆ ಪ್ರತಿಕ್ರಿಯಿಸಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನನ್ನ ವಿರುದ್ದ ಅವರು ಕೊನೆಯ ಅಸ್ತ್ರವನ್ನು ಬಿಟ್ಟಿದ್ದಾರೆ. ಇದಕ್ಕೆಲ್ಲ ಅಂಜುವ ವ್ಯಕ್ತಿ ನಾನಲ್ಲ. ನಾನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವೆ. ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ, ಇದ್ಯಾವ ಲೆಕ್ಕ” ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24
“ನನ್ನ ಮೇಲೆ ಆಕೆ ಅತ್ಯಾಚಾರದ ದೂರುದಾಖಲಿಸಿದರೂ ನಾನು ಇದನ್ನು ಎದುರಿಸಲು ಶಕ್ತನಾಗಿದ್ದೇನೆ. ಈ ವಿಚಾರದಲ್ಲಿ ಮಾನಸಿಕವಾಗಿ ಸಿದ್ದನಾಗಿದ್ದೇನೆ. ಕಾನೂನು ಹೋರಾಟ ನಡೆಸುತ್ತೇನೆ. ನಾನು ಈ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ. ಏನಾಗುತ್ತೋ ನೋಡೋಣ” ಎಂದಿದ್ದಾರೆ
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಪ್ರಕರಣ ಸಂಬಂಧ ಮೊದಲಾಗಿ ನಾನು ದೂರು ನೀಡಿದ್ದೇನೆ. ನನ್ನ ದೂರಿನ ಬಗ್ಗೆ ಏನಾಗಿದೆ ಎಂದು ಪೊಲೀಸ್ ಆಯುಕ್ತರನ್ನು ಕೇಳುತ್ತೇನೆ. ಮೊದಲು ನನ್ನ ಎಫ್ಐಆರ್ ಬಗ್ಗೆ ತನಿಖೆಯಾಗಬೇಕು. ನನ್ನ ವಿರುದ್ಧದ ಷಡ್ಯಂತ್ರದ ಬಗ್ಗೆ ಗೃಹ ಸಚಿವರಿಗೆ ಹೇಳಿದ್ದೇನೆ. ನನಗೂ ಕಾನೂನು ಗೊತ್ತಿದೆ, ವಕೀಲರು ಇದ್ದಾರೆ ಎಂದೂ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…