Featured

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಜಿಂಬಾಬ್ವೆ ಕ್ರಿಕೆಟ್ ತಂಡ ಮಾಜಿ ನಾಯಕ ಬ್ರೆಂಡನ್ ಟೇಲರ್ -Vishwanews24

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಜಿಂಬಾಬ್ವೆ ಕ್ರಿಕೆಟ್ ತಂಡ ಮಾಜಿ ನಾಯಕ ಬ್ರೆಂಡನ್ ಟೇಲರ್ -Vishwanews24

ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಬ್ಯಾಟ್ಸಮನ್ ಬ್ರೆಂಡನ್ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಬ್ರೆಂಡನ್ ಟೇಲರ್ ಸೋಮವಾರ ಐರ್ಲೆಂಡ್ ವಿರುದ್ಧ ಅಂತಿಮ ಪಂದ್ಯವಾಡಿದರು.

2004ರಲ್ಲಿ ಶ್ರೀಲಂಕಾ ವಿರುದ್ಧದ ಬ್ರೆಂಡನ್ ತನ್ನ ಮೊದಲ ಏಕದಿನ ಪಂದ್ಯವಾಡಿದ್ದರು. ಭಾರವಾದ ಹೃದಯದಿಂದ ನಾನು ಕ್ರಿಕೆಟ್ ಗೆ ವಿದಾಯ ಹೇಳುತ್ತಿದ್ದೇನೆ. 17 ವರ್ಷಗಳ ಕ್ರಿಕೆಟ್ ಜೀವನ ನನಗೆ ವಿನಮ್ರತೆ ಕಲಿಸಿದೆ. ಈ ಸ್ಥಾನಕ್ಕೇರಲು ನಾನು ಅದೃಷ್ಟಶಾಲಿ ಎಂದು ಬ್ರೆಂಡನ್ ಹೇಳಿಕೊಂಡಿದ್ದಾರೆ.

205 ಏಕದಿನ ಪಂದ್ಯವಾಡಿರುವ ಬ್ರೆಂಡನ್ ಟೇಲರ್ 6684 ರನ್ ಗಳಿಸಿದ್ದಾರೆ. ಜಿಂಬಾಬ್ವೆ ಪರ ಅತೀ ಹೆಚ್ಚು ರನ್ ಗಳಿಸಿದ ಆ್ಯಂಡಿ ಫ್ಲವರ್ ಅವರಿಗಿಂತ ಕೇವಲ 104 ರನ್ ಕಡಿಮೆ ಗಳಿಸಿದ್ದಾರೆ. ಫ್ಲವರ್ ಅವರು 6786 ರನ್ ಗಳಿಸಿದ್ದಾರೆ.

34 ಟೆಸ್ಟ್ ಪಂದ್ಯವಾಡಿರುವ ಬ್ರೆಂಡನ್ ಟೇಲರ್ 2320 ರನ್ ಗಳಿಸಿದ್ದಾರೆ. 45 ಟಿ20 ಪಂದ್ಯಗಳಿಂದ 934 ರನ್ ಬಾರಿಸಿದ್ದಾರೆ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

19 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

56 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

1 hour ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago