Featured

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್ – Vishwanews24

ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ನವದೆಹಲಿ: ಭಾರತ ವನಿತಾ ನಾಯಕಿ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ಬುಧವಾರ (ಜೂನ್ 8) ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ಮಿಥಾಲಿ, ‘ಇಂದು ನಾನು ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ದಿನ’ ಎಂದು ಬರೆದಿದ್ದಾರೆ.

39 ರ ಹರೆಯದ ಭಾರತೀಯ ಟೆಸ್ಟ್ ಮತ್ತು ಏಕದಿನ ತಂಡದ ನಾಯಕಿ ಮಿಥಾಲಿ 1999 ರಲ್ಲಿ ಪಾದಾರ್ಪಣೆ ಮಾಡಿದ್ದರು. 23 ವರ್ಷಗಳ ಕ್ರಿಕೆಟ್‌ ಜೀವನದಲ್ಲಿ ಅಂತಾಷ್ಟ್ರೀಯ ವೃತ್ತಿಜೀವನದಲ್ಲಿ 232 ಏಕದಿನ , 89 ಟಿ 20 ಮತ್ತು 12 ಟೆಸ್ಟ್‌ಗಳಲ್ಲಿ ಆಡಿದ್ದಾರೆ.

ಇಷ್ಟು ವರ್ಷ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ . ಭಾರತ ತಂಡವು ಕೆಲವು ಪ್ರತಿಭಾವಂತ ಯುವ ಆಟಗಾರರ ಸಮರ್ಥ ಕೈಯಲ್ಲಿದೆ ಮತ್ತು ಭಾರತೀಯ ಕ್ರಿಕೆಟ್‌ನ ಭವಿಷ್ಯವು ಉಜ್ವಲವಾಗಿದೆ. ನನ್ನ ವೃತ್ತಿಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ.ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಏಕದಿನ ಪಂದ್ಯಗಳಲ್ಲಿ 7 ಶತಕಗಳು ಮತ್ತು 64 ಅರ್ಧಶತಕಗಳೊಂದಿಗೆ 7805 ರನ್‌ಗಳನ್ನು,ಟಿ 20 ಯಲ್ಲಿ 17 ಅರ್ಧಶತಕಗಳೊಂದಿಗೆ 2,364 ರನ್‌ಗಳು ಮತ್ತು ಟೆಸ್ಟ್ ನಲ್ಲಿ 699 ರನ್‌ಗಳನ್ನು ಗಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago