ಬೆಂಗಳೂರು: ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ಲೈನ್ ಮ್ಯಾಗಜಿನ್ನಲ್ಲಿ ಕನ್ನಡದ ಸೂಪರ್ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಮುಖಪುಟದಲ್ಲಿ ಕಾಂತಾರ ಚಿತ್ರವನ್ನು ಬಳಸಿಕೊಳ್ಳಲಾಗಿದೆ.
1984ರಿಂದ ಈವರೆಗೆ ಯಾವುದೇ ಕನ್ನಡ ಚಿತ್ರದ ಫೋಟೋಗಳು ಫ್ರಂಟ್ಲೈನ್ ಮ್ಯಾಗಜಿನ್ನ ಮುಖಪುಟದಲ್ಲಿ ಬಂದಿರಲಿಲ್ಲ ಎನ್ನುವುದು ವಿಶೇಷ. ಕಾಂತಾರ ಸಿನಿಮಾ ಈವರೆಗೂ ಅಂದಾಜು 350 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕವೊಂದರಲ್ಲಿ ಅದು 150 ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಇನ್ನೇನು ಸದ್ಯದಲ್ಲೇ ಬಾಲಿವುಡ್ ನಲ್ಲೂ 100 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಿವೆ ಮಾಹಿತಿಗಳು.
ಕನ್ನಡ, ಹಿಂದಿ, ತಮಿಳು ಹಾಗೂ ತೆಲುಗಿನ ನಂತರ ಮಲಯಾಳಂನಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಗಳಿಕೆ ಮಾಡಿದೆ. ಈವರೆಗೂ ಕೆಜಿಎಫ್ 1 ಸಿನಿಮಾ ಮಾಡಿದ ಗಳಿಕೆಗಿಂತಲೂ ಕಾಂತರ ಕಲೆಕ್ಷನ್ ಹೆಚ್ಚು ಎನ್ನುವುದು ಅಲ್ಲಿನ ಮಾಹಿತಿ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪೃಥ್ವಿರಾಜ್ ಸುಕುಮಾರನ್ ವಿತರಣೆ ಮಾಡಿದ್ದು, ಅಂದಾಜು 20 ಕೋಟಿ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.
ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – Vishwanews24
ಕಾಂತಾರ ಸಿನಿಮಾದ ಒಟ್ಟು ಬಜೆಟ್ ಕೇರಳವೊಂದರಲ್ಲೇ ವಾಪಸ್ಸಾಗಿ, ಮೂರ್ನಾಲ್ಕು ಕೋಟಿ ರೂಪಾಯಿ ಲಾಭ ತಂದಿದೆ ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಇನ್ನೂ ಈ ಸಿನಿಮಾ ತುಂಬಿದ ಗೃಹದಲ್ಲಿ ಪ್ರದರ್ಶನ ಕಾಣುತ್ತಿರುವುದರಿಂದ ಮತ್ತಷ್ಟು ದುಡ್ಡು ಹರಿದು ಬರಲಿದೆ. ತೆಲುಗಿನಲ್ಲೂ ಈ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ. ಅಲ್ಲಿಯೂ 40 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆಯಂತೆ. ಅಲ್ಲು ಅರ್ಜುನ್ ತಂದೆ ಈ ಸಿನಿಮಾವನ್ನು ತೆಲುಗಿನಲ್ಲಿ ವಿತರಿಸಿದ್ದು, ಭಾರೀ ಲಾಭವನ್ನೇ ಮಾಡಿಕೊಂಡಿದ್ದಾರಂತೆ.
ಕನ್ನಡ ಸಿನಿಮಾವೊಂದರು ದೇಶದ ಬಹುತೇಕ ಭಾಷೆಗಳಲ್ಲಿ ಯಶಸ್ಸು ಕಂಡಿದ್ದು ತೀರಾ ಕಡಿಮೆ. ಇತ್ತೀಚಿನ ದಿನಗಳಲ್ಲಿ ಕೆಜಿಎಫ್ 2 ಸಿನಿಮಾ ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಚೆನ್ನಾಗಿಯೇ ದುಡ್ಡು ಮಾಡಿತ್ತು. ನಂತರದ ಸ್ಥಾನ ಕಾಂತಾರ ಚಿತ್ರಕ್ಕೆ ಸಿಕ್ಕಿದೆ. ಅಲ್ಲದೇ, ಈ ಸಿನಿಮಾದ ಯಶಸ್ಸು ರಿಷಬ್ ಶೆಟ್ಟಿಗೂ ನ್ಯಾಷನಲ್ ಸ್ಟಾರ್ ಪಟ್ಟ ತಂದು ಕೊಟ್ಟಿದೆ.
ಕಿನ್ನಿಗೋಳಿ : ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್ ಕಳವು – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…