Featured

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ ಲೈನ್ ಮ್ಯಾಗಜಿನ್ ನಲ್ಲಿ ರಾರಾಜಿಸಿದ ಕನ್ನಡದ ಕಾಂತಾರ – Vishwanews24

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ ಲೈನ್ ಮ್ಯಾಗಜಿನ್ ನಲ್ಲಿ ರಾರಾಜಿಸಿದ ಕನ್ನಡದ ಕಾಂತಾರ

ಬೆಂಗಳೂರು: ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ಕನ್ನಡದ ಸೂಪರ್‍ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್‍ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಮುಖಪುಟದಲ್ಲಿ ಕಾಂತಾರ ಚಿತ್ರವನ್ನು ಬಳಸಿಕೊಳ್ಳಲಾಗಿದೆ.

1984ರಿಂದ ಈವರೆಗೆ ಯಾವುದೇ ಕನ್ನಡ ಚಿತ್ರದ ಫೋಟೋಗಳು ಫ್ರಂಟ್‍ಲೈನ್ ಮ್ಯಾಗಜಿನ್‍ನ ಮುಖಪುಟದಲ್ಲಿ ಬಂದಿರಲಿಲ್ಲ ಎನ್ನುವುದು ವಿಶೇಷ. ಕಾಂತಾರ ಸಿನಿಮಾ ಈವರೆಗೂ ಅಂದಾಜು 350 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕವೊಂದರಲ್ಲಿ ಅದು 150 ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಇನ್ನೇನು ಸದ್ಯದಲ್ಲೇ ಬಾಲಿವುಡ್ ನಲ್ಲೂ 100 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಿವೆ ಮಾಹಿತಿಗಳು.

ಕನ್ನಡ, ಹಿಂದಿ, ತಮಿಳು ಹಾಗೂ ತೆಲುಗಿನ ನಂತರ ಮಲಯಾಳಂನಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಗಳಿಕೆ ಮಾಡಿದೆ. ಈವರೆಗೂ ಕೆಜಿಎಫ್ 1 ಸಿನಿಮಾ ಮಾಡಿದ ಗಳಿಕೆಗಿಂತಲೂ ಕಾಂತರ ಕಲೆಕ್ಷನ್ ಹೆಚ್ಚು ಎನ್ನುವುದು ಅಲ್ಲಿನ ಮಾಹಿತಿ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪೃಥ್ವಿರಾಜ್ ಸುಕುಮಾರನ್ ವಿತರಣೆ ಮಾಡಿದ್ದು, ಅಂದಾಜು 20 ಕೋಟಿ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.

ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – Vishwanews24

ಕಾಂತಾರ ಸಿನಿಮಾದ ಒಟ್ಟು ಬಜೆಟ್ ಕೇರಳವೊಂದರಲ್ಲೇ ವಾಪಸ್ಸಾಗಿ, ಮೂರ್ನಾಲ್ಕು ಕೋಟಿ ರೂಪಾಯಿ ಲಾಭ ತಂದಿದೆ ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಇನ್ನೂ ಈ ಸಿನಿಮಾ ತುಂಬಿದ ಗೃಹದಲ್ಲಿ ಪ್ರದರ್ಶನ ಕಾಣುತ್ತಿರುವುದರಿಂದ ಮತ್ತಷ್ಟು ದುಡ್ಡು ಹರಿದು ಬರಲಿದೆ. ತೆಲುಗಿನಲ್ಲೂ ಈ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ. ಅಲ್ಲಿಯೂ 40 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆಯಂತೆ. ಅಲ್ಲು ಅರ್ಜುನ್ ತಂದೆ ಈ ಸಿನಿಮಾವನ್ನು ತೆಲುಗಿನಲ್ಲಿ ವಿತರಿಸಿದ್ದು, ಭಾರೀ ಲಾಭವನ್ನೇ ಮಾಡಿಕೊಂಡಿದ್ದಾರಂತೆ.

ಕನ್ನಡ ಸಿನಿಮಾವೊಂದರು ದೇಶದ ಬಹುತೇಕ ಭಾಷೆಗಳಲ್ಲಿ ಯಶಸ್ಸು ಕಂಡಿದ್ದು ತೀರಾ ಕಡಿಮೆ. ಇತ್ತೀಚಿನ ದಿನಗಳಲ್ಲಿ ಕೆಜಿಎಫ್ 2 ಸಿನಿಮಾ ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಚೆನ್ನಾಗಿಯೇ ದುಡ್ಡು ಮಾಡಿತ್ತು. ನಂತರದ ಸ್ಥಾನ ಕಾಂತಾರ ಚಿತ್ರಕ್ಕೆ ಸಿಕ್ಕಿದೆ. ಅಲ್ಲದೇ, ಈ ಸಿನಿಮಾದ ಯಶಸ್ಸು ರಿಷಬ್ ಶೆಟ್ಟಿಗೂ ನ್ಯಾಷನಲ್ ಸ್ಟಾರ್ ಪಟ್ಟ ತಂದು ಕೊಟ್ಟಿದೆ.

ಕಿನ್ನಿಗೋಳಿ : ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್‌ ಕಳವು – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago