ಇಳಕಲ್ : ಬಾಗಲಕೋಟೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಸತ್ತಿದೆ ಎಂದು ತಿಳಿದುಕೊಂಡಿದ್ದ ಕಂದಮ್ಮ ಕೆಮ್ಮಿದ್ದು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಈ ಘಟನೆ ನಡೆದಿದ್ದು ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ್ದಾನೆ.
13 ತಿಂಗಳ ಹಸುಗೂಸು ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಮಗು ಸಮಸ್ಯೆ ಎದುರಿಸುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ಮಗುವನ್ನು ಪೋಷಕರು ಆಸ್ಪತ್ರೆಯಿಂದ ವಾಪಸ್ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು.
ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. ಸಂಬಂಧಿಕರೆಲ್ಲ ಮನೆಗೆ ಆಗಮಿಸಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿತ್ತು. ಅಷ್ಟರಲ್ಲಿ ಮಗು ಕೆಮ್ಮಿದೆ.ಈ ವೇಳೆ ಮಗು ಬದುಕಿದೆ ಎಂದು ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಪೋಷಕರು ಹಾಗೂ ಸಂಬಂಧಿಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…