Featured

ಅಂತ್ಯಸಂಸ್ಕಾರದ ವೇಳೆ ಮೃತ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟಿದ ಪ್ರಿಯಕರ ; ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ – Vishwanews24

ಅಂತ್ಯಸಂಸ್ಕಾರದ ವೇಳೆ ಮೃತ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟಿದ ಪ್ರಿಯಕರ ; ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ

ಅಸ್ಸಾಂ: ಅನಾರೋಗ್ಯದಿಂದ ಮೃತಪಟ್ಟ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟುವ ಮೂಲಕ ಯುವಕನೊಬ್ಬ ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ ಮಾಡಿದ ಮನಕಲಕುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಮೊಯಿರ್‌ಗಾಂವ್ ನಿವಾಸಿ ಬಿಟುಪಾನ್ ತಮುಲಿ ಮತ್ತು ಕೊಸುವಾ ಗ್ರಾಮ ನಿವಾಸಿ ಪ್ರಾರ್ಥನಾ ಬೋರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಕುಟುಂಬದ ಒಪ್ಪಿಗೆ ಪಡೆದು ಮದುವೆಗೂ ನಿರ್ಧರಿಸಿದ್ದರು. ಆದರೆ ಪ್ರಾರ್ಥನಾ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಾರ್ಥನಾ ಶುಕ್ರವಾರ ಸಂಜೆ ಸಾವನ್ನಪ್ಪಿದ್ದರು.

🌐 ಬೊಮ್ಮಾಯಿ ಮತ್ತೆ ಜೆಡಿಎಸ್‌ಗೆ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇವೆ ..

ಇನ್ನು ಪ್ರೇಯಸಿನ ಸಾವಿನ ಸುದ್ದಿ ತಿಳಿದ ಬಿಟುಪಾನ್ ದುಃಖ ತಡೆಯಲಾರದೇ ಆಕೆಯ ಮನೆಗೆ ಬಂದಿದ್ದು, ಮೃತದೇಹಕ್ಕೆ ತಾಳಿ ಕಟ್ಟಿದ್ದಾರೆ. ಅಲ್ಲದೆ ಆಕೆಯನ್ನು ಹೊರತುಪಡಿಸಿ ಇನ್ಯಾರನ್ನೂ ಮದುವೆಯಾಗುವುದಿಲ್ಲ ಎಂದು ವಾಗ್ದಾನ ಮಾಡಿದ್ದರೆ ಎಂದು ಮೃತಳ ಸಂಬಂಧಿ ಸುಭೋನ್ ಬೋರಾ ತಿಳಿಸಿರುವುದಾಗಿ ವರದಿಯಾಗಿದೆ.

ಪ್ರೇಯಸಿಯ ಮೃತದೇಹಕ್ಕೆ ಹಾರ ಹಾಕಿದ ಬಿಟುಪಾನ್ ಬಳಿಕ ಆಕೆಯ ದೇಹಕ್ಕೆ ಇನ್ನೊಂದು ಹಾರ ಮುಟ್ಟಿಸಿ ತಾನೆ ಹಾಕಿಕೊಂಡಿದ್ದಾರೆ. ಆನಂತರ ಆಕೆಯ ಹಣೆ ಮತ್ತು ಕೆನ್ನೆ ಮೇಲೆ ಸಿಂಧೂರ ಹಚ್ಚಿ ತಾಳಿಯನ್ನೂ ಕಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

🌀 ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

18 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

20 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

21 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

21 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

21 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

21 hours ago