ಅಸ್ಸಾಂ: ಅನಾರೋಗ್ಯದಿಂದ ಮೃತಪಟ್ಟ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟುವ ಮೂಲಕ ಯುವಕನೊಬ್ಬ ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ ಮಾಡಿದ ಮನಕಲಕುವ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಮೊಯಿರ್ಗಾಂವ್ ನಿವಾಸಿ ಬಿಟುಪಾನ್ ತಮುಲಿ ಮತ್ತು ಕೊಸುವಾ ಗ್ರಾಮ ನಿವಾಸಿ ಪ್ರಾರ್ಥನಾ ಬೋರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಕುಟುಂಬದ ಒಪ್ಪಿಗೆ ಪಡೆದು ಮದುವೆಗೂ ನಿರ್ಧರಿಸಿದ್ದರು. ಆದರೆ ಪ್ರಾರ್ಥನಾ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಾರ್ಥನಾ ಶುಕ್ರವಾರ ಸಂಜೆ ಸಾವನ್ನಪ್ಪಿದ್ದರು.
🌐 ಬೊಮ್ಮಾಯಿ ಮತ್ತೆ ಜೆಡಿಎಸ್ಗೆ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇವೆ ..
ಇನ್ನು ಪ್ರೇಯಸಿನ ಸಾವಿನ ಸುದ್ದಿ ತಿಳಿದ ಬಿಟುಪಾನ್ ದುಃಖ ತಡೆಯಲಾರದೇ ಆಕೆಯ ಮನೆಗೆ ಬಂದಿದ್ದು, ಮೃತದೇಹಕ್ಕೆ ತಾಳಿ ಕಟ್ಟಿದ್ದಾರೆ. ಅಲ್ಲದೆ ಆಕೆಯನ್ನು ಹೊರತುಪಡಿಸಿ ಇನ್ಯಾರನ್ನೂ ಮದುವೆಯಾಗುವುದಿಲ್ಲ ಎಂದು ವಾಗ್ದಾನ ಮಾಡಿದ್ದರೆ ಎಂದು ಮೃತಳ ಸಂಬಂಧಿ ಸುಭೋನ್ ಬೋರಾ ತಿಳಿಸಿರುವುದಾಗಿ ವರದಿಯಾಗಿದೆ.
ಪ್ರೇಯಸಿಯ ಮೃತದೇಹಕ್ಕೆ ಹಾರ ಹಾಕಿದ ಬಿಟುಪಾನ್ ಬಳಿಕ ಆಕೆಯ ದೇಹಕ್ಕೆ ಇನ್ನೊಂದು ಹಾರ ಮುಟ್ಟಿಸಿ ತಾನೆ ಹಾಕಿಕೊಂಡಿದ್ದಾರೆ. ಆನಂತರ ಆಕೆಯ ಹಣೆ ಮತ್ತು ಕೆನ್ನೆ ಮೇಲೆ ಸಿಂಧೂರ ಹಚ್ಚಿ ತಾಳಿಯನ್ನೂ ಕಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
🌀 ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…