ಅಸ್ಸಾಂ: ಅನಾರೋಗ್ಯದಿಂದ ಮೃತಪಟ್ಟ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟುವ ಮೂಲಕ ಯುವಕನೊಬ್ಬ ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ ಮಾಡಿದ ಮನಕಲಕುವ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಮೊಯಿರ್ಗಾಂವ್ ನಿವಾಸಿ ಬಿಟುಪಾನ್ ತಮುಲಿ ಮತ್ತು ಕೊಸುವಾ ಗ್ರಾಮ ನಿವಾಸಿ ಪ್ರಾರ್ಥನಾ ಬೋರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಕುಟುಂಬದ ಒಪ್ಪಿಗೆ ಪಡೆದು ಮದುವೆಗೂ ನಿರ್ಧರಿಸಿದ್ದರು. ಆದರೆ ಪ್ರಾರ್ಥನಾ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಾರ್ಥನಾ ಶುಕ್ರವಾರ ಸಂಜೆ ಸಾವನ್ನಪ್ಪಿದ್ದರು.
🌐 ಬೊಮ್ಮಾಯಿ ಮತ್ತೆ ಜೆಡಿಎಸ್ಗೆ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇವೆ ..
ಇನ್ನು ಪ್ರೇಯಸಿನ ಸಾವಿನ ಸುದ್ದಿ ತಿಳಿದ ಬಿಟುಪಾನ್ ದುಃಖ ತಡೆಯಲಾರದೇ ಆಕೆಯ ಮನೆಗೆ ಬಂದಿದ್ದು, ಮೃತದೇಹಕ್ಕೆ ತಾಳಿ ಕಟ್ಟಿದ್ದಾರೆ. ಅಲ್ಲದೆ ಆಕೆಯನ್ನು ಹೊರತುಪಡಿಸಿ ಇನ್ಯಾರನ್ನೂ ಮದುವೆಯಾಗುವುದಿಲ್ಲ ಎಂದು ವಾಗ್ದಾನ ಮಾಡಿದ್ದರೆ ಎಂದು ಮೃತಳ ಸಂಬಂಧಿ ಸುಭೋನ್ ಬೋರಾ ತಿಳಿಸಿರುವುದಾಗಿ ವರದಿಯಾಗಿದೆ.
ಪ್ರೇಯಸಿಯ ಮೃತದೇಹಕ್ಕೆ ಹಾರ ಹಾಕಿದ ಬಿಟುಪಾನ್ ಬಳಿಕ ಆಕೆಯ ದೇಹಕ್ಕೆ ಇನ್ನೊಂದು ಹಾರ ಮುಟ್ಟಿಸಿ ತಾನೆ ಹಾಕಿಕೊಂಡಿದ್ದಾರೆ. ಆನಂತರ ಆಕೆಯ ಹಣೆ ಮತ್ತು ಕೆನ್ನೆ ಮೇಲೆ ಸಿಂಧೂರ ಹಚ್ಚಿ ತಾಳಿಯನ್ನೂ ಕಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
🌀 ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…