ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.
“ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ ಈ ಟ್ವೀಟ್ ಹೊರಬಿದ್ದಿದೆ.
ಇದನ್ನೂ ಓದಿ:
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24
ಕೇಂದ್ರದ ತನಿಖಾ ಸಂಸ್ಥೆಗಳ ದಾಳಿ, ಜೈಲು ವಾಸ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಚಲ ಬಿಡದೆ ಹೋರಾಡಿದ ಡಿ.ಕೆ. ಶಿವಕುಮಾರ್ ಅವರ ಕನಸು ನನಸಾಗುವ ಸಮಯ ಹತ್ತಿರವಾಗಿದ್ದು, ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಅತ್ಯಂತ ಸ್ಮೂತ್ ಆಗಿ ಮುಗಿಸಲು ಕಾಂಗ್ರೆಸ್ ಸಜ್ಜಾಗಿದೆ.

