ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾವನ್ನ ರೀ ರಿಲೀಸ್ ಮಾಡಲಾಗ್ತಿದೆ. ಮಂಡ್ಯ, ಬೆಂಗಳೂರು, ಮೈಸೂರು, ಅಮೇರಿಕಾ ಸೇರಿದಂತೆ ಹಲವೆಡೆ ಸಿನಿಮಾ ಮತ್ತೊಮ್ಮೆ ರಿಲೀಸ್ ಆಗ್ತಿದೆ.
ಚಿತ್ರ ಪ್ರದರ್ಶನದಿಂದ ಬಂದ ಹಣವನ್ನು ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವು ನೀಡಲು ಚಿತ್ರತಂಡ ನಿರ್ಧರಿಸಿದೆ.
ನವೆಂಬರ್ 24ರಂದು ಮಂಡ್ಯ ಬಸ್ ಅಪಘಾತದ ಸುದ್ದಿ ಕೇಳಿ ಅಂಬಿ ಕುಟುಂಬ ಕಂಬನಿ ಮಿಡಿದಿತ್ತು. ಅದೇ ದಿನ ರಾತ್ರಿ ಅಂಬಿ ಕೊನೆಯುಸಿರೆಳೆದರು. ಹೀಗಾಗಿ ಸಿನಿಮಾ ರೀ ರಿಲೀಸ್ನ ಎಲ್ಲಾ ಲಾಭವನ್ನು ಅಪಘಾತ ಸಂತ್ರಸ್ತರ ಕುಟುಂಬಕ್ಕೆ ನೀಡಲಾಗ್ತಿದೆ.
ಅಂಬರೀಶ್ ತಮ್ಮ ಸಿನಿಮಾ ಕೆರಿಯರ್ನಲ್ಲಿ, ಇಷ್ಟಪಟ್ಟ ಸಿನಿಮಾಗಳಲ್ಲಿ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಕೂಡ ಒಂದು.
ಇಂದು ಮಂಡ್ಯದಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಹಾಗೇ ನಾಳೆ ಯಲಹಂಕ ಸೇರಿದಂತೆ ಬೆಂಗಳೂರಿನ ಹಲವು ಕಡೆ ರಿಲೀಸ್ ಆಗಲಿದೆ. ಈ ವೀಕೆಂಡ್ ನಲ್ಲಿ ಅಮೇರಿಕಾದ 8 ಸ್ಕ್ರೀನ್ ಗಳಲ್ಲಿ ಸಿನಿಮಾ ರೀ ರಿಲೀಸ್ ಆಗ್ತಿದೆ. ಈಗಾಗ್ಲೆ ಸಾಕಷ್ಟು ಥಿಯೇಟರ್ ಮಾಲೀಕರಿಂದ ಸಿನಿಮಾ ರಿಲೀಸ್ಗೆ ಬೇಡಿಕೆ ಬಂದಿದೆ. ನಾಳೆ ಸಂಜೆ ವೇಳೆಗೆ ಥಿಯೇಟರ್ ಲಿಸ್ಟ್ ಹೊರಬೀಳಲಿದೆ ಎಂದು ನಿರ್ಮಾಪಕ, ವಿತರಕ ಜಾಕ್ ಮಂಜು ಹೇಳಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…