ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾವನ್ನ ರೀ ರಿಲೀಸ್ ಮಾಡಲಾಗ್ತಿದೆ. ಮಂಡ್ಯ, ಬೆಂಗಳೂರು, ಮೈಸೂರು, ಅಮೇರಿಕಾ ಸೇರಿದಂತೆ ಹಲವೆಡೆ ಸಿನಿಮಾ ಮತ್ತೊಮ್ಮೆ ರಿಲೀಸ್ ಆಗ್ತಿದೆ.
ಚಿತ್ರ ಪ್ರದರ್ಶನದಿಂದ ಬಂದ ಹಣವನ್ನು ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವು ನೀಡಲು ಚಿತ್ರತಂಡ ನಿರ್ಧರಿಸಿದೆ.
ನವೆಂಬರ್ 24ರಂದು ಮಂಡ್ಯ ಬಸ್ ಅಪಘಾತದ ಸುದ್ದಿ ಕೇಳಿ ಅಂಬಿ ಕುಟುಂಬ ಕಂಬನಿ ಮಿಡಿದಿತ್ತು. ಅದೇ ದಿನ ರಾತ್ರಿ ಅಂಬಿ ಕೊನೆಯುಸಿರೆಳೆದರು. ಹೀಗಾಗಿ ಸಿನಿಮಾ ರೀ ರಿಲೀಸ್ನ ಎಲ್ಲಾ ಲಾಭವನ್ನು ಅಪಘಾತ ಸಂತ್ರಸ್ತರ ಕುಟುಂಬಕ್ಕೆ ನೀಡಲಾಗ್ತಿದೆ.
ಅಂಬರೀಶ್ ತಮ್ಮ ಸಿನಿಮಾ ಕೆರಿಯರ್ನಲ್ಲಿ, ಇಷ್ಟಪಟ್ಟ ಸಿನಿಮಾಗಳಲ್ಲಿ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಕೂಡ ಒಂದು.
ಇಂದು ಮಂಡ್ಯದಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಹಾಗೇ ನಾಳೆ ಯಲಹಂಕ ಸೇರಿದಂತೆ ಬೆಂಗಳೂರಿನ ಹಲವು ಕಡೆ ರಿಲೀಸ್ ಆಗಲಿದೆ. ಈ ವೀಕೆಂಡ್ ನಲ್ಲಿ ಅಮೇರಿಕಾದ 8 ಸ್ಕ್ರೀನ್ ಗಳಲ್ಲಿ ಸಿನಿಮಾ ರೀ ರಿಲೀಸ್ ಆಗ್ತಿದೆ. ಈಗಾಗ್ಲೆ ಸಾಕಷ್ಟು ಥಿಯೇಟರ್ ಮಾಲೀಕರಿಂದ ಸಿನಿಮಾ ರಿಲೀಸ್ಗೆ ಬೇಡಿಕೆ ಬಂದಿದೆ. ನಾಳೆ ಸಂಜೆ ವೇಳೆಗೆ ಥಿಯೇಟರ್ ಲಿಸ್ಟ್ ಹೊರಬೀಳಲಿದೆ ಎಂದು ನಿರ್ಮಾಪಕ, ವಿತರಕ ಜಾಕ್ ಮಂಜು ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…