ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾವನ್ನ ರೀ ರಿಲೀಸ್ ಮಾಡಲಾಗ್ತಿದೆ. ಮಂಡ್ಯ, ಬೆಂಗಳೂರು, ಮೈಸೂರು, ಅಮೇರಿಕಾ ಸೇರಿದಂತೆ ಹಲವೆಡೆ ಸಿನಿಮಾ ಮತ್ತೊಮ್ಮೆ ರಿಲೀಸ್ ಆಗ್ತಿದೆ.
ಚಿತ್ರ ಪ್ರದರ್ಶನದಿಂದ ಬಂದ ಹಣವನ್ನು ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವು ನೀಡಲು ಚಿತ್ರತಂಡ ನಿರ್ಧರಿಸಿದೆ.
ನವೆಂಬರ್ 24ರಂದು ಮಂಡ್ಯ ಬಸ್ ಅಪಘಾತದ ಸುದ್ದಿ ಕೇಳಿ ಅಂಬಿ ಕುಟುಂಬ ಕಂಬನಿ ಮಿಡಿದಿತ್ತು. ಅದೇ ದಿನ ರಾತ್ರಿ ಅಂಬಿ ಕೊನೆಯುಸಿರೆಳೆದರು. ಹೀಗಾಗಿ ಸಿನಿಮಾ ರೀ ರಿಲೀಸ್ನ ಎಲ್ಲಾ ಲಾಭವನ್ನು ಅಪಘಾತ ಸಂತ್ರಸ್ತರ ಕುಟುಂಬಕ್ಕೆ ನೀಡಲಾಗ್ತಿದೆ.
ಅಂಬರೀಶ್ ತಮ್ಮ ಸಿನಿಮಾ ಕೆರಿಯರ್ನಲ್ಲಿ, ಇಷ್ಟಪಟ್ಟ ಸಿನಿಮಾಗಳಲ್ಲಿ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಕೂಡ ಒಂದು.
ಇಂದು ಮಂಡ್ಯದಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಹಾಗೇ ನಾಳೆ ಯಲಹಂಕ ಸೇರಿದಂತೆ ಬೆಂಗಳೂರಿನ ಹಲವು ಕಡೆ ರಿಲೀಸ್ ಆಗಲಿದೆ. ಈ ವೀಕೆಂಡ್ ನಲ್ಲಿ ಅಮೇರಿಕಾದ 8 ಸ್ಕ್ರೀನ್ ಗಳಲ್ಲಿ ಸಿನಿಮಾ ರೀ ರಿಲೀಸ್ ಆಗ್ತಿದೆ. ಈಗಾಗ್ಲೆ ಸಾಕಷ್ಟು ಥಿಯೇಟರ್ ಮಾಲೀಕರಿಂದ ಸಿನಿಮಾ ರಿಲೀಸ್ಗೆ ಬೇಡಿಕೆ ಬಂದಿದೆ. ನಾಳೆ ಸಂಜೆ ವೇಳೆಗೆ ಥಿಯೇಟರ್ ಲಿಸ್ಟ್ ಹೊರಬೀಳಲಿದೆ ಎಂದು ನಿರ್ಮಾಪಕ, ವಿತರಕ ಜಾಕ್ ಮಂಜು ಹೇಳಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…