Featured

ಅಕಾಲಿಕ ಮಳೆ ಹಾಗೂ ಚಳಿಯಿಂದ ರಕ್ಷಿಸಲು ಮೇಕೆಗಳಿಗೆ ರೈನ್‍ಕೋಟ್ ಸಿದ್ಧ ಮಾಡಿದ ರೈತ – Vishwanews24

ಅಕಾಲಿಕ ಮಳೆ ಹಾಗೂ ಚಳಿಯಿಂದ ರಕ್ಷಿಸಲು ಮೇಕೆಗಳಿಗೆ ರೈನ್‍ಕೋಟ್ ಸಿದ್ಧ ಮಾಡಿದ ರೈತ

ಚೆನ್ನೈ: ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ರೈತರೊಬ್ಬರು  ತಮ್ಮ ಮೇಕೆಗಳಿಗೆ ತಿರುಗಾಡಿ ಮೇಯಿಸಲು ತೊಂದರೆ ಆಗಬಾರದು ಎಂದು ತಾತ್ಕಾಲಿಕ ರೈನ್‍ಕೋಟ್‍ಗಳನ್ನು ರಚಿಸಿದ್ದಾರೆ.

ತಮಿಳುನಾಡಿನ  ತಂಜಾವೂರಿನ  ಕುಲಮಂಗಲಂ ಗ್ರಾಮದ ಗಣೇಶನ್ (70) ಎಂಬವರಿಗೆ ಪ್ರಾಣಿಗಳೆಂದರೆ ಬಹಳ ಇಷ್ಟ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಜಮೀನಿನಲ್ಲಿ ಕುರಿಗಳು, ಹಸುಗಳು, ಕೋಳೀಗಳನ್ನು ಸಹ ಸಾಕುತ್ತಿದ್ದಾರೆ. ಅಕಾಲಿಕ ಮಳೆಯಿಂದಾಗಿ ತನ್ನ ಪ್ರಾಣಿಗಳಿಗೆ ತೊಂದರೆ ಆಗುತ್ತಿದೆ. ಹಾಗೂ ಮೇಕೆಗಳು ಮೇಯುವಾಗ ವಿಪರೀತ ಚಳಿಯಿಂದ ನಡುಗುತ್ತಿರುವುದನ್ನು ಅವರು ಗಮನಿಸಿದ್ದಾರೆ.

ಇದರಿಂದಾಗಿ ಅವುಗಳ ರಕ್ಷಣೆಗೆ ಏನಾದರೂ ಮಾಡಬೇಕು ಎಂದುಕೊಂಡ ಗಣೇಶನ್ ಅವುಗಳಿಗೆ ರೈನ್‍ಕೋಟ್‍ನ್ನು ನಿರ್ಮಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಕಿ ಮೂಟೆಗಳನ್ನು ತಂದ ಚೀಲವನ್ನು ಅವರು ತಮ್ಮ ಮೇಕೆಗಳಿಗೆಂದೇ ರೈನ್ ಕೋಟ್‍ಗಳನ್ನಾಗಿ ಪರಿವರ್ತಿಸಿದರು. ಇದನ್ನೂ ಓದಿ: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ : ಸಿಎಂ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ – Vishwanews24 

ಮೊದಲಿಗೆ ಅಲ್ಲಿನ ಗ್ರಾಮಸ್ಥರು ಗಣೇಶನ್ ಅವರ ಈ ಕೆಲಸದಿಂದ ಆಶ್ಚರ್ಯಕ್ಕೊಳಗಾದರೂ, ಆನಂತರದಲ್ಲಿ ಗಣೇಶನ್ ಅವರಿಗೆ ಮೇಕೆಗಳ ಮೇಲಿರುವ ಕಾಳಜಿಯ ಕುರಿತು ಶ್ಲಾಘಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago