ಬೆಂಗಳೂರು: ನೆರೆ ಪ್ರವಾಹ ಪರಿಹಾರ ಕಾರ್ಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿರುವ ವಿಷಯಕ್ಕೆ ಸಂಬಂಧಿದಂತೆ ಅಕ್ಟೋಬರ್ 10ರಂದು ಸರ್ಕಾರದ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.
ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆಯಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಇಂದು ಪ್ರತಿಭಟನಾ ಪೂರ್ವಭಾವಿ ಸಿದ್ದತಾ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕುರಿತು ಸಭೆ ನಡೆಸಲಾಗುತ್ತಿದೆ. ಇನ್ನು ಈಸ ಸಭೆಯೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ಅಲ್ಲದೇ ಸಭೆಯಲ್ಲಿ ಪ್ರತಿಭಟನೆ ರೂಪು ರೇಷೆಗಳ ಬಗ್ಗೆ ಚರ್ಚೆ ಆಗಲಿದ್ದು, ನಾಳಿನ ಪ್ರತಿಭಟನೆ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚೆ ಹಾಗೂ ಸದನದ ಒಳಗೆ ಹೋರಾಟ ಮಾಡುವ ಕುರಿತು ಸಹ ಚರ್ಚೆ ಆಗಲಿದೆ.
ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಸಾಕಷ್ಟು ಜನರಿಗೆ ಮನೆ, ಜಾನುವಾರುಗಳು, ಮತ್ತಿತರ ಸೌಲಭ್ಯಗಳು ಇಲ್ಲದಂತಾಗಿದೆ. ಈ ವಿಷಯಕ್ಕೆ ಸಂಬಂಧಿದಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವೈಮಾನಿಕ ಸಮೀಕ್ಷೆ ಕೂಡ ಮಾಡಿತ್ತು ಆದರೆ ಸಮೀಕ್ಷೆ ನಡೆದು ಒಂದೂವರೆ ತಿಂಗಳುಗಳೇ ಕಳೆದಿವೆ.ಆದರೆ ಪರಿಹಾರ ಮಾತ್ರ ಶೂನ್ಯವಾಗಿತ್ತು. ಮೊನ್ನೆಯಷ್ಟೇ ಕೇಂದ್ರದಿಂದ 1200 ಕೋಟಿಯಷ್ಟು ಪರಿಹಾರದ ನೆರವು ನೀಡಿದ್ದಾರೆ. ಆದರೂ ಪರಿಹಾರ ಬಹಳ ಕಡಿಮೆಯಾಗಿದೆ ಎಂಬ ಆರೋಪ ವಿರೋಧ ಪಕ್ಷದ ನಾಯಕರಿಂದ ಕೇಳಿ ಬರುತ್ತಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…