Featured

ಅಕ್ಟೋಬರ್ 10ರಂದು ಸರ್ಕಾರದ ವಿರುದ್ಧ ಜೆಡಿಎಸ್​ ಬೃಹತ್ ಪ್ರತಿಭಟನೆ -Vishwanews24

ಬೆಂಗಳೂರು: ನೆರೆ ಪ್ರವಾಹ ಪರಿಹಾರ ಕಾರ್ಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿರುವ ವಿಷಯಕ್ಕೆ ಸಂಬಂಧಿದಂತೆ ಅಕ್ಟೋಬರ್ 10ರಂದು ಸರ್ಕಾರದ ವಿರುದ್ಧ ಜೆಡಿಎಸ್​ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ನಗರದ ಮೌರ್ಯ ಸರ್ಕಲ್​ ಗಾಂಧಿ ಪ್ರತಿಮೆಯಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಇಂದು ಪ್ರತಿಭಟನಾ ಪೂರ್ವಭಾವಿ ಸಿದ್ದತಾ ಜೆಡಿಎಸ್​ ಕಚೇರಿ ಜೆಪಿ ಭವನದಲ್ಲಿ ಕುರಿತು ಸಭೆ ನಡೆಸಲಾಗುತ್ತಿದೆ. ಇನ್ನು ಈಸ ಸಭೆಯೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿದೆ.

ಅಲ್ಲದೇ ಸಭೆಯಲ್ಲಿ ಪ್ರತಿಭಟನೆ ರೂಪು ರೇಷೆಗಳ ಬಗ್ಗೆ ಚರ್ಚೆ ಆಗಲಿದ್ದು, ನಾಳಿನ ಪ್ರತಿಭಟನೆ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚೆ ಹಾಗೂ ಸದನದ ಒಳಗೆ ಹೋರಾಟ ಮಾಡುವ ಕುರಿತು ಸಹ ಚರ್ಚೆ ಆಗಲಿದೆ.

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಸಾಕಷ್ಟು ಜನರಿಗೆ ಮನೆ, ಜಾನುವಾರುಗಳು, ಮತ್ತಿತರ ಸೌಲಭ್ಯಗಳು ಇಲ್ಲದಂತಾಗಿದೆ. ಈ ವಿಷಯಕ್ಕೆ ಸಂಬಂಧಿದಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವೈಮಾನಿಕ ಸಮೀಕ್ಷೆ ಕೂಡ ಮಾಡಿತ್ತು ಆದರೆ ಸಮೀಕ್ಷೆ ನಡೆದು ಒಂದೂವರೆ ತಿಂಗಳುಗಳೇ ಕಳೆದಿವೆ.ಆದರೆ ಪರಿಹಾರ ಮಾತ್ರ ಶೂನ್ಯವಾಗಿತ್ತು. ಮೊನ್ನೆಯಷ್ಟೇ ಕೇಂದ್ರದಿಂದ 1200 ಕೋಟಿಯಷ್ಟು ಪರಿಹಾರದ ನೆರವು ನೀಡಿದ್ದಾರೆ. ಆದರೂ ಪರಿಹಾರ ಬಹಳ ಕಡಿಮೆಯಾಗಿದೆ ಎಂಬ ಆರೋಪ ವಿರೋಧ ಪಕ್ಷದ ನಾಯಕರಿಂದ ಕೇಳಿ ಬರುತ್ತಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago