ಬೆಂಗಳೂರು: ನೆರೆ ಪ್ರವಾಹ ಪರಿಹಾರ ಕಾರ್ಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿರುವ ವಿಷಯಕ್ಕೆ ಸಂಬಂಧಿದಂತೆ ಅಕ್ಟೋಬರ್ 10ರಂದು ಸರ್ಕಾರದ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.
ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆಯಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಇಂದು ಪ್ರತಿಭಟನಾ ಪೂರ್ವಭಾವಿ ಸಿದ್ದತಾ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕುರಿತು ಸಭೆ ನಡೆಸಲಾಗುತ್ತಿದೆ. ಇನ್ನು ಈಸ ಸಭೆಯೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ಅಲ್ಲದೇ ಸಭೆಯಲ್ಲಿ ಪ್ರತಿಭಟನೆ ರೂಪು ರೇಷೆಗಳ ಬಗ್ಗೆ ಚರ್ಚೆ ಆಗಲಿದ್ದು, ನಾಳಿನ ಪ್ರತಿಭಟನೆ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚೆ ಹಾಗೂ ಸದನದ ಒಳಗೆ ಹೋರಾಟ ಮಾಡುವ ಕುರಿತು ಸಹ ಚರ್ಚೆ ಆಗಲಿದೆ.
ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಸಾಕಷ್ಟು ಜನರಿಗೆ ಮನೆ, ಜಾನುವಾರುಗಳು, ಮತ್ತಿತರ ಸೌಲಭ್ಯಗಳು ಇಲ್ಲದಂತಾಗಿದೆ. ಈ ವಿಷಯಕ್ಕೆ ಸಂಬಂಧಿದಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವೈಮಾನಿಕ ಸಮೀಕ್ಷೆ ಕೂಡ ಮಾಡಿತ್ತು ಆದರೆ ಸಮೀಕ್ಷೆ ನಡೆದು ಒಂದೂವರೆ ತಿಂಗಳುಗಳೇ ಕಳೆದಿವೆ.ಆದರೆ ಪರಿಹಾರ ಮಾತ್ರ ಶೂನ್ಯವಾಗಿತ್ತು. ಮೊನ್ನೆಯಷ್ಟೇ ಕೇಂದ್ರದಿಂದ 1200 ಕೋಟಿಯಷ್ಟು ಪರಿಹಾರದ ನೆರವು ನೀಡಿದ್ದಾರೆ. ಆದರೂ ಪರಿಹಾರ ಬಹಳ ಕಡಿಮೆಯಾಗಿದೆ ಎಂಬ ಆರೋಪ ವಿರೋಧ ಪಕ್ಷದ ನಾಯಕರಿಂದ ಕೇಳಿ ಬರುತ್ತಿದೆ.
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…