ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಟೀಮ್ ನೇಶನ್ ಫಸ್ಟ್ ಸಹಯೋಗದೊಂದಿಗೆ ಅಕ್ಟೋಬರ್ ೨ ರಂದು ಗಾಂಧಿ ಜಯಂತಿಯ ಅಂಗವಾಗಿ ಮಲ್ಪೆ ಪಡುಕರೆ ಶಾಂತಿನಗರದಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಿರುವುದಾಗಿ ಬ್ಯಾಂಕಿನ ಆಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಿದ್ದು ಬೆಳಿಗ್ಗೆ ೮.೩೦ಕ್ಕೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ. ರಘುಪತಿ ಭಟ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಟೀಮ್ ನೇಶನ್ ಫಸ್ಟ್ ಅಧ್ಯಕ್ಷರಾದ ಸೂರಜ್ ಕಿದಿಯೂರು ಹಾಗೂ ಬ್ಯಾಂಕಿನ ನಿದೇರ್ಶಕರು ಭಾಗವಹಿಸಲಿದ್ದು, ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಟೀಮ್ ನೇಶನ್ ಫಸ್ಟ್ ತಂಡದೊ0ದಿಗೆ ೨೦೦ ಮಂದಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…