Featured

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ : ಪರಮೇಶ್ವರ್ – vishwanews24

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ : ಪರಮೇಶ್ವರ್

ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದ್ರು. ರಾಜ್ಯದಲ್ಲಿ ದರೋಡೆ, ಮನೆಗಳ್ಳತನ, ಹಗಲು ದರೋಡೆಗಳು ಜಾಸ್ತಿ ಆಗ್ತಿದೆ. ಪೊಲೀಸ್ ಅಧಿಕಾರಗಳೇ ಕಳ್ಳತನದಲ್ಲಿ ಭಾಗಿಯಾಗ್ತಾ ಇದ್ದಾರೆ. ಬೇಲಿಯೇ ಎದ್ದು ಹೊಲ ಮೆಯ್ಯುತ್ತಿದೆ. ಜನರು ಇದನ್ನ ‌ಮಾತಾಡ್ತಾ ಇದ್ದಾರೆ. ಪೊಲೀಸರ ಮೇಲೆ ನಂಬಿಕೆ ಕಳೆದು ಹೋಗ್ತಿದೆ. ಕಳ್ಳತನ, ದರೋಡೆ ಕೇಸ್‌ನಲ್ಲಿ ಪೊಲೀಸರು ಭಾಗಿಯಾಗ್ತಾ ಇದ್ದಾರೆ. ರಕ್ಷಕರೇ ಭಕ್ಷಕರು ಆಗ್ತಿದ್ದಾರೆ. ಇಂತಹ ಅಕ್ರಮದಲ್ಲಿ ಭಾಗಿಯಾಗೋರನ್ನ ಕೆಲಸದಿಂದ ವಜಾ ಮಾಡಿ. ಇದಕ್ಕೆ ಕಾನೂನು ತರಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಸಚಿವ ಪರಮೇಶ್ವರ್ ಉತ್ತರ ನೀಡಿ, 37 ಜಿಲ್ಲೆಗಳಲ್ಲಿ 88 ಜನ ಪೊಲೀಸರು ಅಕ್ರಮಗಳಲ್ಲಿ ಭಾಗಿಯಾದ ಕೇಸ್ ಇದೆ. ನಮ್ಮ ಸರ್ಕಾರ ಬಂದಾಗಿನಿಂದ ಮಾತ್ರ ಇದು ಆಗಿಲ್ಲ. 1.6 ಲಕ್ಷ ಸಿಬ್ಬಂದಿ ಇದ್ದಾರೆ‌ ಎಲ್ಲರನ್ನು ಒಂದೇ ತಕ್ಕಡಿಯಾಗಿ ತೂಗೋಕೆ ಆಗೊಲ್ಲ. ಎಲ್ಲರೂ ಕಳ್ಳರು ಅನ್ನೋದು ಸರಿಯಲ್ಲ. ಬೇಲಿನೇ ಎದ್ದು ಹೊಲ ಮೇಯ್ತಾ ಇದ್ದಾರೆ ಅಂದರೆ ಹೇಗೆ‌? ಒಳ್ಳೆ ಅಧಿಕಾರಿಗಳು ಇದ್ದಾರೆ. ಎಲ್ಲರನ್ನೂ ಒಟ್ಟಿಗೆ ಸೇರಿಸೋದು ಬೇಡ ಎಂದರು.

ಅಕ್ರಮದಲ್ಲಿ ಪೊಲೀಸರು ಶಾಮೀಲಾಗಿರೋರನ್ನ ಸೂಕ್ಷ್ಮವಾಗಿ ನೋಡ್ತೀವಿ‌. 88 ಜನರ ಮೇಲೆ ಕೇಸ್ ಹಾಕಲಾಗಿದೆ. FIR ಹಾಕಲಾಗಿದೆ. ಅಮಾನತು ಮಾಡಲಾಗಿದೆ‌. ಬಂಧನ ಮಾಡಲಾಗಿದೆ. ಅನೇಕ ಕ್ರಮಗಳನ್ನ ನಾವು ತೆಗೆದುಕೊಂಡಿದ್ದೇವೆ. ಸಾವಿರಾರು ಕೋಟಿ ಡ್ರಗ್ಸ್ ಹಿಡಿದ್ದೇವೆ. ಪೊಲೀಸ್ ಇಲಾಖೆ ಚೆನ್ನಾಗಿ ಕೆಲಸ ಮಾಡ್ತಿರೋದಕ್ಕೆ ನಮ್ಮ ರಾಜ್ಯ ಶಾಂತವಾಗಿದೆ‌. ಬೇರೆ ರಾಜ್ಯದ ಬಗ್ಗೆಯೂ ನೋಡಬೇಕು. ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಅಮಾನತು ಅಲ್ಲ. ಅವರನ್ನ ಕೆಲಸದಿಂದ ವಜಾ ಮಾಡೋ ಕೆಲಸ ಮಾಡ್ತಾ ಇದ್ದೇವೆ ಅಂತ ತಿಳಿಸಿದರು

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

13 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

14 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

16 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

16 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

16 hours ago