Featured

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ : ಪರಮೇಶ್ವರ್ – vishwanews24

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ : ಪರಮೇಶ್ವರ್

ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದ್ರು. ರಾಜ್ಯದಲ್ಲಿ ದರೋಡೆ, ಮನೆಗಳ್ಳತನ, ಹಗಲು ದರೋಡೆಗಳು ಜಾಸ್ತಿ ಆಗ್ತಿದೆ. ಪೊಲೀಸ್ ಅಧಿಕಾರಗಳೇ ಕಳ್ಳತನದಲ್ಲಿ ಭಾಗಿಯಾಗ್ತಾ ಇದ್ದಾರೆ. ಬೇಲಿಯೇ ಎದ್ದು ಹೊಲ ಮೆಯ್ಯುತ್ತಿದೆ. ಜನರು ಇದನ್ನ ‌ಮಾತಾಡ್ತಾ ಇದ್ದಾರೆ. ಪೊಲೀಸರ ಮೇಲೆ ನಂಬಿಕೆ ಕಳೆದು ಹೋಗ್ತಿದೆ. ಕಳ್ಳತನ, ದರೋಡೆ ಕೇಸ್‌ನಲ್ಲಿ ಪೊಲೀಸರು ಭಾಗಿಯಾಗ್ತಾ ಇದ್ದಾರೆ. ರಕ್ಷಕರೇ ಭಕ್ಷಕರು ಆಗ್ತಿದ್ದಾರೆ. ಇಂತಹ ಅಕ್ರಮದಲ್ಲಿ ಭಾಗಿಯಾಗೋರನ್ನ ಕೆಲಸದಿಂದ ವಜಾ ಮಾಡಿ. ಇದಕ್ಕೆ ಕಾನೂನು ತರಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಸಚಿವ ಪರಮೇಶ್ವರ್ ಉತ್ತರ ನೀಡಿ, 37 ಜಿಲ್ಲೆಗಳಲ್ಲಿ 88 ಜನ ಪೊಲೀಸರು ಅಕ್ರಮಗಳಲ್ಲಿ ಭಾಗಿಯಾದ ಕೇಸ್ ಇದೆ. ನಮ್ಮ ಸರ್ಕಾರ ಬಂದಾಗಿನಿಂದ ಮಾತ್ರ ಇದು ಆಗಿಲ್ಲ. 1.6 ಲಕ್ಷ ಸಿಬ್ಬಂದಿ ಇದ್ದಾರೆ‌ ಎಲ್ಲರನ್ನು ಒಂದೇ ತಕ್ಕಡಿಯಾಗಿ ತೂಗೋಕೆ ಆಗೊಲ್ಲ. ಎಲ್ಲರೂ ಕಳ್ಳರು ಅನ್ನೋದು ಸರಿಯಲ್ಲ. ಬೇಲಿನೇ ಎದ್ದು ಹೊಲ ಮೇಯ್ತಾ ಇದ್ದಾರೆ ಅಂದರೆ ಹೇಗೆ‌? ಒಳ್ಳೆ ಅಧಿಕಾರಿಗಳು ಇದ್ದಾರೆ. ಎಲ್ಲರನ್ನೂ ಒಟ್ಟಿಗೆ ಸೇರಿಸೋದು ಬೇಡ ಎಂದರು.

ಅಕ್ರಮದಲ್ಲಿ ಪೊಲೀಸರು ಶಾಮೀಲಾಗಿರೋರನ್ನ ಸೂಕ್ಷ್ಮವಾಗಿ ನೋಡ್ತೀವಿ‌. 88 ಜನರ ಮೇಲೆ ಕೇಸ್ ಹಾಕಲಾಗಿದೆ. FIR ಹಾಕಲಾಗಿದೆ. ಅಮಾನತು ಮಾಡಲಾಗಿದೆ‌. ಬಂಧನ ಮಾಡಲಾಗಿದೆ. ಅನೇಕ ಕ್ರಮಗಳನ್ನ ನಾವು ತೆಗೆದುಕೊಂಡಿದ್ದೇವೆ. ಸಾವಿರಾರು ಕೋಟಿ ಡ್ರಗ್ಸ್ ಹಿಡಿದ್ದೇವೆ. ಪೊಲೀಸ್ ಇಲಾಖೆ ಚೆನ್ನಾಗಿ ಕೆಲಸ ಮಾಡ್ತಿರೋದಕ್ಕೆ ನಮ್ಮ ರಾಜ್ಯ ಶಾಂತವಾಗಿದೆ‌. ಬೇರೆ ರಾಜ್ಯದ ಬಗ್ಗೆಯೂ ನೋಡಬೇಕು. ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಅಮಾನತು ಅಲ್ಲ. ಅವರನ್ನ ಕೆಲಸದಿಂದ ವಜಾ ಮಾಡೋ ಕೆಲಸ ಮಾಡ್ತಾ ಇದ್ದೇವೆ ಅಂತ ತಿಳಿಸಿದರು

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

22 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

24 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

24 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago