ಗಾಂಧಿನಗರ: ಅಕ್ರಮವಾಗಿ ಭಾರತದ ಗಡಿಯನ್ನು ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಿಎಸ್ಎಫ್ ಪಡೆ ಬಂಧಿಸಿ, ಅವರ ಬಳಿ ಇದ್ದ 10 ದೋಣಿಗಳನ್ನು ವಶ ಪಡಿಸಿಕೊಂಡಿದೆ.
ಇಂಡೋ ಪಾಕ್ನ ಗಡಿಭಾಗವಾದ ಗುಜರಾತ್ನ ಕಚ್ ಜಿಲ್ಲೆಯ ಹರಾಮಿ ನಲ್ಲಾ ಬಳಿ ಈ ಘಟನೆ ನಡೆದಿದೆ. ಕೆಲವು ಪಾಕಿಸ್ತಾನಿ ಮೀನುಗಾರರು ತಮ್ಮ ದೋಣಿಗಳೊಂದಿಗೆ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿದ್ದರು. ಇದನ್ನು ಗಮನಿಸಿದ ಬಿಎಸ್ಎಫ್ನ ವಿಶೇಷ ತಂಡವು ತಕ್ಷಣ ಕ್ರಮ ಕೈಗೊಂಡು, ನಾಲ್ವರು ಮೀನುಗಾರರನ್ನು ಬಂಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹರಾಮಿ ನಲ್ಲಾ ಭೂಪ್ರದೇಶವನ್ನು ಬಿಎಸ್ಎಫ್ ಯೋಧರು ಸುತ್ತುವರಿದಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅಷ್ಟೇ ಅಲ್ಲದೇ ಆ ಪ್ರದೇಶದಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದೆ. ಹಾಗೂ ಪಾಕಿಸ್ತಾನಿ ಮೀನುಗಾರರಿಂದ ವಶಪಡಿಸಿಕೊಂಡ ದೋಣಿಯನ್ನು ಕೂಲಂಕೂಷವಾಗಿ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…