Featured

ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಮಾಲ್ಡೀವ್ಸ್ ಮಾಜಿ ಉಪಾಧ್ಯಕ್ಷ ಗಡಿಪಾರು -Vishwanews24

ಚೆನ್ನೈ,: ಯಾವುದೇ ಸೂಕ್ತ ಪ್ರಯಾಣ ದಾಖಲೆಗಳಿಲ್ಲದೆ ಗುರುವಾರ ಬೆಳಗ್ಗೆ ಬೋಟ್‌ನ ಮೂಲಕ ಚೆನ್ನೈನ ಬಂದರ್‌ಗೆ ಪ್ರವೇಶಿಸಿದ್ದ ಮಾಲ್ಡೀವ್ಸ್‌ನ ಮಾಜಿ ಉಪಾಧ್ಯಕ್ಷ ಅಹ್ಮದ್ ಅದೀಬ್ ಅಬ್ದುಲ್ ಗಫೂರ್‌ರನ್ನು ಶನಿವಾರ ಬೆಳಗ್ಗೆ ಅವರ ದೇಶಕ್ಕೆ ಗಡಿಪಾರು ಮಾಡಲಾಗಿದೆ.

ತನಗೆ ರಾಜಕೀಯ ಆಶ್ರಯ ನೀಡಿ ಎಂಬ ಗಫೂರ್ ಮನವಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ ಬಳಿಕ ತಮಿಳುನಾಡು ಸರಕಾರ ಅವರನ್ನು ಗಡಿಪಾರು ಮಾಡಿರುವುದಾಗಿ ಹೇಳಿದೆ.

ಯಾವುದೇ ಅಧಿಕೃತ ದಾಖಲೆ ಇಲ್ಲದೇ ಮಾಲ್ಡೀವ್ಸ್ ಮಾಜಿ ಉಪಾಧ್ಯಕ್ಷ ಸಿಂಗಾಪುರ ನೋಂದಣಿಯ ನೌಕೆಯಲ್ಲಿ ಆಗಮಿಸಿದ್ದ ವೇಳೆ ಟ್ಯುಟಿಕಾರಿನ್ ಪೊಲೀಸರು ಬಂಧಿಸಿ, ಸರಕು ಸಾಗಣೆಯ ನೌಕೆಯಲ್ಲಿಯೇ ಇರಿಸಿದ್ದರು. ಹಣ ದುರುಪಯೋಗದ ಆರೋಪ ಎದುರಿಸುತ್ತಿದ್ದ ಅಹ್ಮದ್ ದೇಶ ಬಿಟ್ಟು ತೆರಳದಂತೆ ಮಾಲ್ಡೀವ್ಸ್ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ವಿರ್ಗೊ-9 ಬೋಟ್‌ನಲ್ಲಿ ಆಗಮಿಸಿದ್ದ ಅಹ್ಮದ್ ಅದೀಬ್ ಹಾಗೂ ಬೋಟ್‌ನಲ್ಲಿದ್ದ ಇತರ 9 ಸಿಬ್ಬಂದಿಯನ್ನು ಅಂತರ್‌ರಾಷ್ಟ್ರೀಯ ಕಡಲ ಗಡಿರೇಖೆಯಲ್ಲಿ ಮಾಲ್ಡೀವ್ಸ್‌ನ ಭದ್ರತಾ ಸಿಬ್ಬಂದಿಗೆ ಭಾರತೀಯ ತಟ ರಕ್ಷಕ ಪಡೆಯ ಸಿಬ್ಬಂದಿ ಹಸ್ತಾಂತರಿಸಿದೆ,

ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಅದೀಬ್ ಹೇಗೆ ಪಲಾಯನ ಮಾಡಿದರು, ಅವರಿಗೆ ಯಾರ್ಯಾರು ನೆರವಾದರು ಎಂಬ ಬಗ್ಗೆ ಮಾಲ್ದೀವ್ಸ್ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಜುಲೈ 11ರಂದು ವಿರ್ಗೋ ಎಂಬ ದೋಣಿ ಮಾಲ್ಡೀವ್ಸ್ ಗೆ ಸರಕುಗಳನ್ನು ತೆಗೆದುಕೊಂಡು ಹೋಗಿತ್ತು. ನಂತರ ಅಲ್ಲಿಂದ ಜುಲೈ 28ರಂದು ಮರಳುವಾಗ ಅಹ್ಮದ್ ಅದೀಬ್ ತನಗೆ ಭಾರತದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಹೇಳಿ ಹಡಗಿನಲ್ಲಿ ಪ್ರಯಾಣ ಬೆಳೆಸಿದ್ದ. ಈ ಹಡಗಿನಲ್ಲಿ ಎಂಟು ಮಂದಿ ಇಂಡೋನೇಷಿಯನ್ನರು ಮತ್ತು ಒಬ್ಬರು ಭಾರತೀಯ ಸೇರಿ ಒಂಬತ್ತು ಹಡಗಿನ ಸಿಬ್ಬಂದಿ ಇದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago