ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು ಪೊಲೀಸರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.
ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು (ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.
ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ನಿನ್ನೆ ಬೆಂಗಳೂರಿಗೆ ತೆರಳಿದ್ದರು.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…