ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು ಪೊಲೀಸರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.
ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು (ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.
ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ನಿನ್ನೆ ಬೆಂಗಳೂರಿಗೆ ತೆರಳಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…