ಬೆಂಗಳೂರು: ಮಸೀದಿ ಹಾಗೂ ಸಮುದಾಯ ಭವನಗಳಲ್ಲಿ ನಿಯಮ ಬಾಹಿರವಾಗಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸರ್ಕಾರ ಸಂಚು ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳೇ ನಿಮ್ಮ ಮೂಗಿನ ನೇರದಲ್ಲೇ ಅಧಿಕಾರಿಗಳು ಅಕ್ರಮ ಮತದಾರರನ್ನು ಪಟ್ಟಿಗೆ ಸೇರಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಎಸ್ಐಆರ್ ಪ್ರಕ್ರಿಯೆಯ ಬಳಿಕ ಬಾಂಗ್ಲಾದೇಶಿಯರನ್ನು ಓಡಿಸಿದ ಮೇಲೆ ಅವರೆಲ್ಲಾ ಕರ್ನಾಟಕಕ್ಕೆ ವಲಸೆ ಬಂದಿದ್ದಾರೆ. ಈಗ ಕರ್ನಾಟಕದಲ್ಲಿ ಆಶ್ರಯ ಪಡೆದಿರುವ ಅಕ್ರಮ ಬಾಂಗ್ಲಾದೇಶದ ಮತದಾರರನ್ನು ಸಕ್ರಮ ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ದೂರಿದರು.
ಇದನ್ನೂ ಓದಿ:
ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯ ವಿಡಿಯೋಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ ಅವರು, ಕಾಂಗ್ರೆಸ್ ಕಳೆದ ಏಳೆಂಟು ವರ್ಷಗಳಿಂದಲೂ ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಕಲಬುರ್ಗಿಯಲ್ಲಿ ಇದೇ ಅಕ್ರಮ ಕೆಲಸವನ್ನು ಮಾಡುತ್ತಾ ಬಂದಿದೆ ಎಂದು ಹೇಳಿದರು.
ಈ ಅಕ್ರಮ ವಲಸಿಗರಿಗೆ ಯಾವುದೇ ಸೂಕ್ತ ದಾಖಲೆಗಳಿಲ್ಲದಿದ್ದರೂ, ಸೈಬರ್ ಕೇಂದ್ರಗಳ ಮೂಲಕ ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಇವರಿಗೆ ಶಾಶ್ವತ ವಾಸದ ಪ್ರಮಾಣ ಪತ್ರ ನೀಡಲು ಸ್ವತಃ ಸಿಎಂ ತೀರ್ಮಾನಿಸಿದ್ದಾರೆ. ಇದೆಲ್ಲವೂ 2028ರ ವಿಧಾನಸಭಾ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ನಡೆಸುತ್ತಿರುವ ಸಂಚು ಎಂದು ಸಿಟ್ಟು ಹೊರಹಾಕಿದರು.
ಇದನ್ನೂ ಓದಿ:
ಚುನಾವಣಾ ನಿಯಮಾವಳಿಗಳ ಉಲ್ಲಂಘನೆಯನ್ನು ಪ್ರಸ್ತಾಪಿಸಿದ ಸಚಿವರು, ರಾಜ್ಯ ಸರ್ಕಾರದ ಮೌಖಿಕ ಆದೇಶದ ಮೇಲೆ ಅಧಿಕಾರಿಗಳು ಹಾಗೂ ಬಿಎಲ್ಒಗಳು ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳನ್ನು ಮಸೀದಿಗಳು, ಶಾದಿ ಮಹಲ್ಗಳು ಹಾಗೂ ಕಲ್ಯಾಣ ಮಂಟಪಗಳಲ್ಲಿ ಕೂಡಿ ಹಾಕಿ ಸಾಮೂಹಿಕವಾಗಿ ಗಣತಿ ನಮೂನೆ ಅರ್ಜಿಗಳನ್ನು ಕೊಡಿಸಲಾಗುತ್ತಿದೆ ಎಂದರು.
ಬೆಂಗಳೂರಿನ ಬಹಳಷ್ಟು ಮೂಲ ಮತದಾರರು ಬೇರೆ ಕಡೆಗೆ ಶಿಫ್ಟ್ ಆಗಿದ್ದಾರೆ. ಆದರೆ ಅವರ ಜಾಗಕ್ಕೆ ಅಕ್ರಮ ಮತದಾರರನ್ನು ತರಲು ಬಿಎಲ್ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಸರ್ಕಾರ ನಮ್ಮ ಬೂತ್ ಮಟ್ಟದ ಏಜೆಂಟರನ್ನು (BLA) ಹೆದರಿಸುತ್ತಿದ್ದು, ಕೇವಲ ಕಾಂಗ್ರೆಸ್ನ ಬಿಎಲ್ಎಗಳನ್ನು ಮಾತ್ರ ಕರೆದುಕೊಂಡು ಹೋಗುವಂತೆ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:
ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಹೊಸದಾಗಿ ಪರಿಷ್ಕರಣೆ ನಡೆಸಬೇಕು ಎಂದು ಸಚಿವರು ಒತ್ತಾಯಿಸಿದರು. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ಅತ್ಯಂತ ಶುದ್ಧವಾದ ಮತ್ತು ಕಠಿಣವಾದ ಮತಪಟ್ಟಿ ಪರಿಷ್ಕರಣೆ ಮಾಡಿದೆ. ಅದೇ ಮಾದರಿಯ ಕ್ರಮ ಈಗ ಕರ್ನಾಟಕದಲ್ಲೂ ಆಗಬೇಕು. ಈ ಇಡೀ ಅಕ್ರಮ ಪ್ರಕ್ರಿಯೆಯ ವಿರುದ್ಧ ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]