ಬಂಟ್ವಾಳ: “ಅಕ್ರಮ ಗೋ ಸಾಗಾಟದ ವಿಷಯದಲ್ಲಿ ಕೈ ಹಾಕುವ ಯೋಚನೆ ಮಾಡಿದ್ದರೆ ನೀವು ನಿಮ್ಮ ಕೈಗಳನ್ನು ಮರೆತು ಬಿಡಿ” ಎಂದು ದುರ್ಗವಾಹಿನಿಯ ಸಂಚಾಲಕಿ ದಿವ್ಯಾ ಮಲ್ಯ ಹೇಳಿದ್ದಾರೆ.
ಬುಧವಾರ ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣಾ ವೇದಿಕೆ ಮಂಗಳೂರು ವತಿಯಿಂದ ಬಂಟ್ವಾಳದಲ್ಲಿ ಗೋವಂಶದ ಮೇಲಿನ ಕ್ರೌರ್ಯ, ಗೋಕಳ್ಳತನ, ಅಕ್ರಮ ಗೋಸಾಗಾಟ ವಿರುದ್ಧ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿ, “ಹಿಂದೂ ಹೆಣ್ಣು ಮಕ್ಕಳ ತಂಟೆಗೆ ಬಂದರೆ ನಿಮ್ಮ ಕಣ್ಣುಗಳನ್ನು ಹಾಗೂ ಅಕ್ರಮ ಗೋ ಸಾಗಾಟದ ವಿಷಯದಲ್ಲಿ ನಿಮ್ಮ ಕೈಗಳನ್ನು ಮರೆತು ಬಿಡುವುದು ಒಳ್ಳೆಯದು” ಎಂದು ಎಚ್ಚರಿಸಿದ್ದಾರೆ.
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಸಂಚಾಲಕ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿದರು. ಗೋವಂಶವನ್ನು ನಿರ್ಮೂಲನೆ ಮಾಡಲು ಪ್ರಚೋದಿಸುವ ಅಕ್ರಮ ಗೋಸಾಗಾಟವನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ, ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಅಧ್ಯಕ್ಷ ನರಸಿಂಹ ಶೆಟ್ಟಿ, ವಿಶ್ವ ಹಿಂದು ಪರಿಷತ್ ಬಂಟ್ವಾಳ ಪ್ರಖಂಡ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬಜರಂಗದಳ ಬಂಟ್ವಾಳ ಪ್ರಖಂಡ ಸಂಚಾಲಕ ಅಕೇಶ್, ಪ್ರಮುಖರಾದ ಗುರುರಾಜ ಬಂಟ್ವಾಳ, ಬಿಜೆಪಿ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ವಜ್ರನಾಥ ಕಲ್ಲಡ್ಕ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…