ಬಂಟ್ವಾಳ: “ಅಕ್ರಮ ಗೋ ಸಾಗಾಟದ ವಿಷಯದಲ್ಲಿ ಕೈ ಹಾಕುವ ಯೋಚನೆ ಮಾಡಿದ್ದರೆ ನೀವು ನಿಮ್ಮ ಕೈಗಳನ್ನು ಮರೆತು ಬಿಡಿ” ಎಂದು ದುರ್ಗವಾಹಿನಿಯ ಸಂಚಾಲಕಿ ದಿವ್ಯಾ ಮಲ್ಯ ಹೇಳಿದ್ದಾರೆ.
ಬುಧವಾರ ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣಾ ವೇದಿಕೆ ಮಂಗಳೂರು ವತಿಯಿಂದ ಬಂಟ್ವಾಳದಲ್ಲಿ ಗೋವಂಶದ ಮೇಲಿನ ಕ್ರೌರ್ಯ, ಗೋಕಳ್ಳತನ, ಅಕ್ರಮ ಗೋಸಾಗಾಟ ವಿರುದ್ಧ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿ, “ಹಿಂದೂ ಹೆಣ್ಣು ಮಕ್ಕಳ ತಂಟೆಗೆ ಬಂದರೆ ನಿಮ್ಮ ಕಣ್ಣುಗಳನ್ನು ಹಾಗೂ ಅಕ್ರಮ ಗೋ ಸಾಗಾಟದ ವಿಷಯದಲ್ಲಿ ನಿಮ್ಮ ಕೈಗಳನ್ನು ಮರೆತು ಬಿಡುವುದು ಒಳ್ಳೆಯದು” ಎಂದು ಎಚ್ಚರಿಸಿದ್ದಾರೆ.
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಸಂಚಾಲಕ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿದರು. ಗೋವಂಶವನ್ನು ನಿರ್ಮೂಲನೆ ಮಾಡಲು ಪ್ರಚೋದಿಸುವ ಅಕ್ರಮ ಗೋಸಾಗಾಟವನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ, ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಅಧ್ಯಕ್ಷ ನರಸಿಂಹ ಶೆಟ್ಟಿ, ವಿಶ್ವ ಹಿಂದು ಪರಿಷತ್ ಬಂಟ್ವಾಳ ಪ್ರಖಂಡ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬಜರಂಗದಳ ಬಂಟ್ವಾಳ ಪ್ರಖಂಡ ಸಂಚಾಲಕ ಅಕೇಶ್, ಪ್ರಮುಖರಾದ ಗುರುರಾಜ ಬಂಟ್ವಾಳ, ಬಿಜೆಪಿ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ವಜ್ರನಾಥ ಕಲ್ಲಡ್ಕ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…