ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ.
2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019ರ ಆರಂಭದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆ ಮೂಲಕ ಕುಮಾರಸ್ವಾಮಿ ಅವರಿಗೆ ರಿಲೀಫ್ ಸಿಕ್ಕಿತ್ತು. ಆದರೆ ಮಹದೇವಸ್ವಾಮಿ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಲ್ಲಿ ಪ್ರಕರಣ ದಾಖಲಾಗಿದ್ದರೂ ಕ್ರಮ ಕೈಗೊಳ್ಳದೇ, ಈಗ ಇದ್ದಕ್ಕಿದ್ದಂತೆ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಸಿಟ್ಟಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು. ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…