ಅಕ್ಬರ್ನಗರ: ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ (ಎಲ್ಡಿಎ) ಅಧಿಕಾರಿಗಳು ಹೇಳಿದ್ದಾರೆ. ಜೂನ್ 19ರಿಂದ ಪ್ರಾರಂಭವಾಗಿ ಇಂದು (ಜೂ.20) ಈ ಕಾರ್ಯಚರಣೆ ಕೊನೆಗೊಂಡಿದೆ.
ಬುಲ್ಡೋಜರ್ಗಳು ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಸುಮಾರು 1,169 ಅಕ್ರಮ ವಸತಿ ಆಸ್ತಿಗಳು ಮತ್ತು 100 ಕ್ಕೂ ಹೆಚ್ಚು ವಾಣಿಜ್ಯ ಆಸ್ತಿಗಳನ್ನು ನೆಲಸಮ ಮಾಡಲಾಗಿದೆ. ಇದರಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಮಸೀದಿಗಳನ್ನು ಕೂಡ ಕೆಡವಿದ್ದಾರೆ. 24.5 ಎಕರೆ ಜಾಗದಲ್ಲಿ ನಡೆದಿರುವ ಅಕ್ರಮ ಒತ್ತುವರಿ ತೆರವು ಕಾರ್ಯ ಕಳೆದ ವರ್ಷ ಡಿಸೆಂಬರ್ನಲ್ಲಿ ಆರಂಭವಾಗಿತ್ತು. ಈ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳು ಸೇರಿದಂತೆ 1,320 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
ಜೂನ್ 18 ರಂದು ಸುಮಾರು 100 ಕಟ್ಟಡಗಳನ್ನು ಕೆಡವಲಾಯಿತು. ಇದೀಗ ಅದರ ಅವಶೇಷಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ಇನ್ನು ಈ ತೆರವು ಕಾರ್ಯಚರಣೆಯಿಂದ ಮನೆ ಕಳೆದುಕೊಂಡಿರುವ ಬಡ ಜನರಿಗೆ ನಗರದ ಇತರ ಭಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪರ್ಯಾಯ ವಸತಿ ಒದಗಿಸಲಾಗಿದೆ. ಅಕ್ಬರ್ನಗರದ 1,800ಕ್ಕೂ ಹೆಚ್ಚು ಕುಟುಂಬಗಳು ವಸತಿ ಸೌಲಭ್ಯ ಪಡೆದಿವೆ. ಈ ಪ್ರದೇಶದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…