ಅಕ್ಬರ್ನಗರ: ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ (ಎಲ್ಡಿಎ) ಅಧಿಕಾರಿಗಳು ಹೇಳಿದ್ದಾರೆ. ಜೂನ್ 19ರಿಂದ ಪ್ರಾರಂಭವಾಗಿ ಇಂದು (ಜೂ.20) ಈ ಕಾರ್ಯಚರಣೆ ಕೊನೆಗೊಂಡಿದೆ.
ಬುಲ್ಡೋಜರ್ಗಳು ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಸುಮಾರು 1,169 ಅಕ್ರಮ ವಸತಿ ಆಸ್ತಿಗಳು ಮತ್ತು 100 ಕ್ಕೂ ಹೆಚ್ಚು ವಾಣಿಜ್ಯ ಆಸ್ತಿಗಳನ್ನು ನೆಲಸಮ ಮಾಡಲಾಗಿದೆ. ಇದರಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಮಸೀದಿಗಳನ್ನು ಕೂಡ ಕೆಡವಿದ್ದಾರೆ. 24.5 ಎಕರೆ ಜಾಗದಲ್ಲಿ ನಡೆದಿರುವ ಅಕ್ರಮ ಒತ್ತುವರಿ ತೆರವು ಕಾರ್ಯ ಕಳೆದ ವರ್ಷ ಡಿಸೆಂಬರ್ನಲ್ಲಿ ಆರಂಭವಾಗಿತ್ತು. ಈ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳು ಸೇರಿದಂತೆ 1,320 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
ಜೂನ್ 18 ರಂದು ಸುಮಾರು 100 ಕಟ್ಟಡಗಳನ್ನು ಕೆಡವಲಾಯಿತು. ಇದೀಗ ಅದರ ಅವಶೇಷಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ಇನ್ನು ಈ ತೆರವು ಕಾರ್ಯಚರಣೆಯಿಂದ ಮನೆ ಕಳೆದುಕೊಂಡಿರುವ ಬಡ ಜನರಿಗೆ ನಗರದ ಇತರ ಭಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪರ್ಯಾಯ ವಸತಿ ಒದಗಿಸಲಾಗಿದೆ. ಅಕ್ಬರ್ನಗರದ 1,800ಕ್ಕೂ ಹೆಚ್ಚು ಕುಟುಂಬಗಳು ವಸತಿ ಸೌಲಭ್ಯ ಪಡೆದಿವೆ. ಈ ಪ್ರದೇಶದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…