Featured

ಅಕ್ರಮ ಮುಚ್ಚಿಡಲೆಂದೇ ಇಂಧನ ಖಾತೆಗಾಗಿ ಪಟ್ಟು ಹಿಡಿದ ಡೀಕೇಶಿ ; ಶೋಭಾ ಕರಂದ್ಲಾಜೆ ಆರೋಪ

ಮಂಗಳೂರು : “ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಇಂಧನ ಸಚಿವರಾಗಿದ್ದಾಗ ನಡೆಸಿರುವ `ಅಕ್ರಮ’ ಮುಚ್ಚಿಡುವ ಒಂದೇ ಉದ್ದೇಶದಿಂದ ಮಾಜಿ ಇಂಧನ ಸಚಿವ ಡಿ ಕೆ ಶಿವಕುಮಾರ್ ಪ್ರಸಕ್ತ ಮೈತ್ರಿ ಸರ್ಕಾರದಲ್ಲೂ ಇಂಧನ ಖಾತೆಗೆ ಪಟ್ಟು ಹಿಡಿದಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಇಂಧನ ಖಾತೆ ಯಥೇಚ್ಛ ದುರುಪಯೋಗವಾಗಿದೆ ಎಂದು ಹಿಂದೊಮ್ಮೆ ಇಂಧನ ಸಚಿವರೂ ಆಗಿದ್ದ ಕರಂದ್ಲಾಜೆ ಆಪಾದಿಸಿದ್ದಾರೆ.

“ಡೀಕೇಶಿಯಿಂದ ಇಂಧನ ಖಾತೆಯ ದುರುಪಯೋಗವಾಗಿದೆ. ಈ ವಲಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಪರಿಮಿತ ಅಕ್ರಮಗಳು ನಡೆದಿವೆ. ಒಂದೊಮ್ಮೆ ಇಂಧನ ಖಾತೆ ಕೈತಪ್ಪಿದರೆ, ಇಲಾಖೆಯಲ್ಲಿ ನಡೆದಿರುವ ಅಕ್ರಮಗಳು ಒಂದೊಂದಾಗಿ ಮೇಲೆ ಬೀಳಬಹುದೆಂಬ ಭೀತಿಯಿಂದ ಅವರೀಗ ಮತ್ತೊಂದು ಅವಧಿಗೆ ಇಂಧನ ಖಾತೆಯ ಮೇಲೆ ಹಕ್ಕು ಸ್ಥಾಪಿಸಲು ಮುಂದಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಸರ್ಕಾರ ರಚನೆಗೊಂಡು ಎರಡು ವಾರವಾದರೂ ಖಾತೆ ಹಂಚಿಕೆಗಾಗಿ ಹಗ್ಗಜಗ್ಗಾಟ ಮುಂದುವರಿದೆ. ಈ ಅವಧಿಯಲ್ಲಿ ಕಾಂಗ್ರೆಸ್ ಶಾಸಕರು ರಿಸಾರ್ಟ್ ರಾಜಕಾರಣ ಮತ್ತು ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಮಹತ್ತಾದ ಸಾಧನೆ ಮಾಡಿದ್ದಾರೆ” ಎಂದು ಕರಂದ್ಲಾಜೆ ಆರೋಪಿಸಿದ್ದಾರೆ.

ಧಾರಾಕಾರ ಮಳೆಯ ಬಳಿಕವೂ ಮಂಗಳೂರು, ಉಡುಪಿಯ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳತ್ತ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿಲ್ಲ ಎಂದವರು ಟೀಕಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

22 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

22 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

24 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

24 hours ago