ಮಂಗಳೂರು : “ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಇಂಧನ ಸಚಿವರಾಗಿದ್ದಾಗ ನಡೆಸಿರುವ `ಅಕ್ರಮ’ ಮುಚ್ಚಿಡುವ ಒಂದೇ ಉದ್ದೇಶದಿಂದ ಮಾಜಿ ಇಂಧನ ಸಚಿವ ಡಿ ಕೆ ಶಿವಕುಮಾರ್ ಪ್ರಸಕ್ತ ಮೈತ್ರಿ ಸರ್ಕಾರದಲ್ಲೂ ಇಂಧನ ಖಾತೆಗೆ ಪಟ್ಟು ಹಿಡಿದಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಇಂಧನ ಖಾತೆ ಯಥೇಚ್ಛ ದುರುಪಯೋಗವಾಗಿದೆ ಎಂದು ಹಿಂದೊಮ್ಮೆ ಇಂಧನ ಸಚಿವರೂ ಆಗಿದ್ದ ಕರಂದ್ಲಾಜೆ ಆಪಾದಿಸಿದ್ದಾರೆ.
“ಡೀಕೇಶಿಯಿಂದ ಇಂಧನ ಖಾತೆಯ ದುರುಪಯೋಗವಾಗಿದೆ. ಈ ವಲಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಪರಿಮಿತ ಅಕ್ರಮಗಳು ನಡೆದಿವೆ. ಒಂದೊಮ್ಮೆ ಇಂಧನ ಖಾತೆ ಕೈತಪ್ಪಿದರೆ, ಇಲಾಖೆಯಲ್ಲಿ ನಡೆದಿರುವ ಅಕ್ರಮಗಳು ಒಂದೊಂದಾಗಿ ಮೇಲೆ ಬೀಳಬಹುದೆಂಬ ಭೀತಿಯಿಂದ ಅವರೀಗ ಮತ್ತೊಂದು ಅವಧಿಗೆ ಇಂಧನ ಖಾತೆಯ ಮೇಲೆ ಹಕ್ಕು ಸ್ಥಾಪಿಸಲು ಮುಂದಾಗಿದ್ದಾರೆ” ಎಂದು ಟೀಕಿಸಿದ್ದಾರೆ.
“ಸರ್ಕಾರ ರಚನೆಗೊಂಡು ಎರಡು ವಾರವಾದರೂ ಖಾತೆ ಹಂಚಿಕೆಗಾಗಿ ಹಗ್ಗಜಗ್ಗಾಟ ಮುಂದುವರಿದೆ. ಈ ಅವಧಿಯಲ್ಲಿ ಕಾಂಗ್ರೆಸ್ ಶಾಸಕರು ರಿಸಾರ್ಟ್ ರಾಜಕಾರಣ ಮತ್ತು ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಮಹತ್ತಾದ ಸಾಧನೆ ಮಾಡಿದ್ದಾರೆ” ಎಂದು ಕರಂದ್ಲಾಜೆ ಆರೋಪಿಸಿದ್ದಾರೆ.
ಧಾರಾಕಾರ ಮಳೆಯ ಬಳಿಕವೂ ಮಂಗಳೂರು, ಉಡುಪಿಯ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳತ್ತ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿಲ್ಲ ಎಂದವರು ಟೀಕಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…