ಬೆಂಗಳೂರು : ತನ್ನ ಅಕ್ರಮ ಸಂಬಂಧ ನೋಡಿದ ತಾಯಿಯನ್ನು ಮಗಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೊಂಗಸಂದ್ರದಲ್ಲಿ ನಡೆದಿದೆ.
ಮೃತರನ್ನು ಜಯಲಕ್ಷ್ಮಿ( 46) ಎಂದು ಗುರುತಿಸಲಾಗಿದೆ. ಆರೋಪಿ ಮಗಳು ಪವಿತ್ರಾ ಮತ್ತು ಆಕೆಯ ಪ್ರಿಯಕರ ಲವಣೇಶ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರಂಭದಲ್ಲಿ ಕೊಲೆಯನ್ನು ಅಪಘಾತ ಎಂದು ಬಂಬಿಸಲಾಗಿತ್ತು,. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂಬುದು ಎಂದು ದೃಢಪಟ್ಟಿದೆ.
ಜಯಲಕ್ಷ್ಮಿ ಅವರ ಕಟ್ಟಡದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ಆರೋಪಿ ಹಾಗೂ ಅದೇ ಕಟ್ಟಡದಲ್ಲಿ ಬಾಡಿಗೆದಾರನಾಗಿದ್ದ ಲವಣೇಶ್ ಎಂಬುವರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ 11 ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಮದುವೆಯಾಗಿದ್ದು, 10 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾನೆ. ಆದರೆ, ಇತ್ತೀಚೆಗಷ್ಟೇ ಲವಣೇಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ತಾಯಿ ಒಪ್ಪಿರಲಿಲ್ಲ ಎನ್ನಲಾಗಿದೆ.
ಬುಧವಾರ ಮಧ್ಯಾಹ್ನ 3 ಗಂಟೆಗೆ ತನ್ನ ತಾಯಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪವಿತ್ರಾ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಮತ್ತು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಅದನ್ನು ಅಸಹಜ ಸಾವು ಎಂದು ವರ್ಗೀಕರಿಸಿದ್ದರು. ಆದರೆ, ಶುಕ್ರವಾರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.
ಈ ವರದಿಯ ನಂತರ ಪೊಲೀಸರಿಗೆ ಪವಿತ್ರಾಳ ಮೇಲೆ ಅನುಮಾನ ಮೂಡಿದ್ದು, ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧದ ಬಗ್ಗೆ ತಾಯಿ ಪ್ರಶ್ನಿಸಿದಾಗ ಟವೆಲ್ನಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಪವಿತ್ರಾ ಮತ್ತು ಲವಣೇಶ್ ಇಬ್ಬರನ್ನೂ ಬಂಧಿಸಲಾಗಿದ್ದು, ಪೊಲೀಸ್ ವಶದಲ್ಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…