ಬೆಂಗಳೂರು : ತನ್ನ ಅಕ್ರಮ ಸಂಬಂಧ ನೋಡಿದ ತಾಯಿಯನ್ನು ಮಗಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೊಂಗಸಂದ್ರದಲ್ಲಿ ನಡೆದಿದೆ.
ಮೃತರನ್ನು ಜಯಲಕ್ಷ್ಮಿ( 46) ಎಂದು ಗುರುತಿಸಲಾಗಿದೆ. ಆರೋಪಿ ಮಗಳು ಪವಿತ್ರಾ ಮತ್ತು ಆಕೆಯ ಪ್ರಿಯಕರ ಲವಣೇಶ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರಂಭದಲ್ಲಿ ಕೊಲೆಯನ್ನು ಅಪಘಾತ ಎಂದು ಬಂಬಿಸಲಾಗಿತ್ತು,. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂಬುದು ಎಂದು ದೃಢಪಟ್ಟಿದೆ.
ಜಯಲಕ್ಷ್ಮಿ ಅವರ ಕಟ್ಟಡದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ಆರೋಪಿ ಹಾಗೂ ಅದೇ ಕಟ್ಟಡದಲ್ಲಿ ಬಾಡಿಗೆದಾರನಾಗಿದ್ದ ಲವಣೇಶ್ ಎಂಬುವರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ 11 ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಮದುವೆಯಾಗಿದ್ದು, 10 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾನೆ. ಆದರೆ, ಇತ್ತೀಚೆಗಷ್ಟೇ ಲವಣೇಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ತಾಯಿ ಒಪ್ಪಿರಲಿಲ್ಲ ಎನ್ನಲಾಗಿದೆ.
ಬುಧವಾರ ಮಧ್ಯಾಹ್ನ 3 ಗಂಟೆಗೆ ತನ್ನ ತಾಯಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪವಿತ್ರಾ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಮತ್ತು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಅದನ್ನು ಅಸಹಜ ಸಾವು ಎಂದು ವರ್ಗೀಕರಿಸಿದ್ದರು. ಆದರೆ, ಶುಕ್ರವಾರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.
ಈ ವರದಿಯ ನಂತರ ಪೊಲೀಸರಿಗೆ ಪವಿತ್ರಾಳ ಮೇಲೆ ಅನುಮಾನ ಮೂಡಿದ್ದು, ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧದ ಬಗ್ಗೆ ತಾಯಿ ಪ್ರಶ್ನಿಸಿದಾಗ ಟವೆಲ್ನಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಪವಿತ್ರಾ ಮತ್ತು ಲವಣೇಶ್ ಇಬ್ಬರನ್ನೂ ಬಂಧಿಸಲಾಗಿದ್ದು, ಪೊಲೀಸ್ ವಶದಲ್ಲಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…
ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ ಬೆಂಗಳೂರು: ವಿದ್ಯಾರ್ಥಿಗಳ…
ಉಡುಪಿ: ಬಸ್ ಢಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ನಿಧನ ಉಡುಪಿ: ನಗರದ ಕೋರ್ಟ್ ರಸ್ತೆ ಸಮೀಪ ಶನಿವಾರ…