ಇಡಿ ತನಿಖೆಯಿಂದ ಡಿಕೆಶಿಗೆ ಬಿಗ್ ರಿಲೀಫ್ : ಪ್ರಕರಣ ರದ್ದುಗೊಳಿಸಿದ ಸುಪ್ರೀಂ – Vishwanews24

Featured, ರಾಷ್ಟ್ರ ನ್ಯೂಸ್

ಅಕ್ರಮ ಹಣ ವರ್ಗಾವಣೆ  : ಇಡಿ ತನಿಖೆಯಿಂದ ಡಿಕೆಶಿಗೆ ಬಿಗ್ ರಿಲೀಫ್  – ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಸುಪ್ರೀಂ 

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್​ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120ಬಿ ಅಡಿ ಪ್ರಕರಣವನ್ನ ದಾಖಲಿಸಿತ್ತು. ಇಡಿ ದಾಖಲಿಸಿದ್ದ ಈ ಪ್ರಕರಣವನ್ನು ಇದೀಗ ಸುಪ್ರೀಂ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಈ ಮೂಲಕ ಡಿಕೆಶಿ ಅವರಿಗೆ ಇಡಿ ತನಿಖೆಯಿಂದ ಬಿಗ್ ರಿಲೀಫ್ ದೊರೆತಂತಾಗಿದೆ.

ಪಣಂಬೂರು: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ; ಇನ್ನೋರ್ವನಿಗಾಗಿ ಶೋಧ – Vishwanews24

ಇನ್ನು ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ನಡೆಸಿದೆ. ವಿಚಾರಣೆ ನಡೆಸಿದ ಪೀಠವು ಈ ಪ್ರಕರಣ ಕ್ರಿಮಿನಲ್ ಪಿತೂರಿಯ ಭಾಗವಾಗಿಲ್ಲ. ಆದ್ದರಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬರುವುದಿಲ್ಲ. ಹೈಕೋರ್ಟ್ ಆದೇಶವನ್ನು ರದ್ದು ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂದು ಆದೇಶ ನೀಡಿದೆ.

ಲೋಕಸಭಾ ಚುನಾವಣೆ: ನಾಳೆ ರಾಜ್ಯದ 28 ಕ್ಷೇತ್ರಗಳ  ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ :  ಯಡಿಯೂರಪ್ಪ – Vishwanews24

Leave a Reply