ಬೆಂಗಳೂರು :ಸಚಿವ ಜಮೀರ್ ಅಹ್ಮದ್ ಖಾನ್ ಇದ್ದ ಹೋಟೆಲ್ ಮೇಲೆ ಹೈದರಾಬಾದ್ ಪೊಲೀಸರು ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.
ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್ ವಾಸ್ತವ್ಯವಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.
ಈ ದಾಳಿ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್, ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದರು.
ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಬಿಆರ್ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರಕ್ಕೆ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…