ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ 3 ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4 ನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದ್ದಾರೆ.
ಇದನ್ನೂ ಓದಿ:
ತಲಾ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸುವುದು, ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಅಥವಾ ಸಾಕ್ಷ್ಯ ನಾಶಕ್ಕೆ ಯತ್ನ ಮಾಡಬಾರದು. ವಿಚಾರಣಾ ಸಮಯದಲ್ಲಿ ತಪ್ಪದೇ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ನವೆಂಬರ್ 6,2023 ರಂದು ಪುತ್ತೂರಿನ ನೆಹರು ನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಅಕ್ಷಯ್ ಕಲ್ಲೇಗ ಪರಿಚಿತರಿಂದಲೇ ಹತ್ಯೆಗೀಡಾಗಿದ್ದರು. ಈ ಪ್ರಕರಣ ಸಂಬಂಧ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದರು.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…