ನವದೆಹಲಿ, : “ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಸನ್ಯಾಸಿಯಾಗಬೇಕು ಎಂದುಕೊಂಡಿದ್ದ ನನ್ನನ್ನು ಬದುಕೇ ಪ್ರಧಾನಿಯನ್ನಾಗಿ ಮಾಡಿತು. ಜೀವನ ತಾನಾಗೇ ರೂಪುಗೊಂಡಿತು, ಅದು ನಾನು ರೂಪಿಸಿದ್ದಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಸಂದರ್ಶನದಲ್ಲಿ, ಮೋದಿ ಅವರು ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಬದುಕಿನ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಶನ ಸಂಪೂರ್ಣ ರಾಜಕೀಯವನ್ನು ಹೊರತಾಗಿಸಿದ್ದಾಗಿದ್ದರಿಂದ ಮೋದಿ ಅವರ ಬದುಕಿನ ಬಗ್ಗೆ ಜನಸಾಮಾನ್ಯರಿಗೆ ಗೊತ್ತಿರದಿದ್ದ ಹಲವು ಕುತೂಹಲಕರ ವಿಷಯಗಳು ಹೊರಬಂದವು.
“ಚಿಕ್ಕ ವಯಸ್ಸಿನಿಂದಲೂ ನನಗೆ ಸೇನೆಯನ್ನು ಕಂಡರೆ ಗೌರವ. ನಂತರ ರಾಮಕೃಷ್ಣ ಮಿಶನ್ ಮತ್ತು ಅಲ್ಲಿನ ಅಧ್ಯಾತ್ಮ ಗುರುಗಳಿಂದ ಸ್ಫೂರ್ತಿ ಪಡೆದು ಅಧ್ಯಾತ್ಮದ ಕಡದೆ ಆಕರ್ಷಿತವಾದೆ. ಸನ್ಯಾಸಿಯಾಗಬೇಕು ಎಂದುಕೊಂದಿದ್ದ ನಾನು, ಎಂದೋ ಒಂದು ದಿನ ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ನಿರೀಕ್ಷಿಸಿಯೇ ಇರಲಿಲ್ಲ. ಆದರೆ ಬದುಕು ತಾನೇ ಹಾಗೆ ಆಕಾರಗೊಂಡು, ನನ್ನನ್ನು ಪ್ರಧಾನಿಯನ್ನಾಗಿ ಮಾಡಿತು”-
ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗುವವರೆಗೂ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಯೇ ಇರಲಿಲ್ಲ! ಮುಖ್ಯಮಂತ್ರಿಯಾದ ನಂತರ ಖಾತೆ ತೆರೆಯ ಬೇಕಾದ ಅಗತ್ಯ ಬಂದಾಗ ಅವರು ಬ್ಯಾಂಕ್ ಖಾತೆ ತೆರೆದರು. ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…