Featured

ಅಗತ್ಯ ಬಂದಲ್ಲಿ ಉತ್ತರ ಪ್ರದೇಶ ಮಾಡದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು : ಸಿಎಂ ಬೊಮ್ಮಾಯಿ – Vishwanews24

ಅಗತ್ಯ ಬಂದಲ್ಲಿ ಉತ್ತರ ಪ್ರದೇಶ ಮಾಡದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು : ಸಿಎಂ ಬೊಮ್ಮಾಯಿ

ಬೆಂಗಳೂರು: ಉತ್ತರ ಪ್ರದೇಶದಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಲ್ಲಿನ ಮುಖ್ಯಮಂತ್ರಿಗಳು ಸರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದರೆ ಅದನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಲಾಗುವುದಿಲ್ಲ. ಅಂತಹ ಪ್ರಸಂಗ ಬಂದಲ್ಲಿ ಉತ್ತರ ಪ್ರದೇಶ ಮಾಡದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ಕರ್ನಾಟಕಕ್ಕೆ ಯೋಗಿ ಮಾದರಿಯ ಸಿಎಂ ಬೇಕೆಂಬ ಕಾರ್ಯಕರ್ತರ ಬೇಡಿಕೆ ಕುರಿತ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕೆಲವು ಶಕ್ತಿಗಳು ದುರ್ಘಟನೆಗಳನ್ನು ಸೃಷ್ಟಿ ಮಾಡಲೆಂದೇ ಇರುತ್ತಾರೆ. ಹಿಜಾಬ್ ವಿಚಾರದಲ್ಲಿ ಐವರಿಂದ ಶುರುವಾದ ವಿವಾದ ಇಡೀ ರಾಜ್ಯಕ್ಕೆ ಹಬ್ಬಿ ಬಳಿಕ ಕಾನೂನಿನ ಮುಖಾಂತರ ತಿಳಿ ಹೇಳಿದ ನಂತರ ಸದ್ಯ ಎಲ್ಲರೂ ಕಾನೂನು ಪಾಲಿಸುತ್ತಿದ್ದಾರೆ. ಆಝಾನ್ ವಿಚಾರದಲ್ಲಿಯೂ ಇದೇ ಆಗಿದೆ ಎಂದರು.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರ ಐದು ತಂಡಗಳನ್ನು ಮಾಡಲಾಗಿದೆ. ಕೇರಳಕ್ಕೆ ಪೊಲೀಸರ ತಂಡವನ್ನು ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡುವುದಿಲ್ಲ. ದುಷ್ಟಶಕ್ತಿಗಳ ವಿರುದ್ದ ಹೋರಾಡುವುದಕ್ಕೆ ಸರ್ಕಾರ ಸದಾ ಬದ್ದ ಎಂದು ಅವರು ತಿಳಿಸಿದರು.

ಕಠಿಣ ಕ್ರಮದ ಸರ್ಕಾರ ಎಂದು ಪಕ್ಷದ ಕಾರ್ಯಕರ್ತರೇ ಲೇವಡಿ ಮಾಡುತ್ತಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಹರ್ಷ ಕೊಲೆ ವಿಚಾರದಲ್ಲಿ 24 ಗಂಟೆಯೊಳಗೆ ಆರೋಪಿಗಳ ಬಂಧನವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆಯಾದಾಗಲೂ ಕ್ರಮ ಕ್ಷಿಪ್ರವಾಗಿ ಆಗಿದೆ. ಪಾಂಡವಪುರ ಘಟನೆ ವೇಳೆ ಖುದ್ದಾಗಿ ನಾನೇ ಹೋಗಿ ಕ್ರಮಕ್ಕೆ ವ್ಯವಸ್ಥೆ ಮಾಡಿದ್ದೇನೆ. ರಾಜ್ಯದಲ್ಲಿ ದುಷ್ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಭಯೋತ್ಪಾದಕರನ್ನು ತಿಹಾರ್ ಜೈಲಿಗೆ ಕಳುಹಿಸುವ ಕೆಲಸ ನಿರಂತರ ನಡೆಯುತ್ತಿದೆ ಎಂದರು.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸುವುದು ಕೇಂದ್ರ ಸರ್ಕಾರದ ಕೆಲಸ. ಈ ಸಂಬಂಧ ನಾವು ನೀಡಬೇಕಾದ ಎಲ್ಲಾ ವರದಿಗಳನ್ನು ಕೇಂದ್ರಕ್ಕೆ ನೀಡಿದ್ದೇವೆ. ಶೀಘ್ರ ಕೇಂದ್ರದ ನಿರ್ಣಯ ಹೊರ ಬೀಳಬಹುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago