Featured

ಅಗತ್ಯ ಬಂದಲ್ಲಿ ಉತ್ತರ ಪ್ರದೇಶ ಮಾಡದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು : ಸಿಎಂ ಬೊಮ್ಮಾಯಿ – Vishwanews24

ಅಗತ್ಯ ಬಂದಲ್ಲಿ ಉತ್ತರ ಪ್ರದೇಶ ಮಾಡದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು : ಸಿಎಂ ಬೊಮ್ಮಾಯಿ

ಬೆಂಗಳೂರು: ಉತ್ತರ ಪ್ರದೇಶದಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಲ್ಲಿನ ಮುಖ್ಯಮಂತ್ರಿಗಳು ಸರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದರೆ ಅದನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಲಾಗುವುದಿಲ್ಲ. ಅಂತಹ ಪ್ರಸಂಗ ಬಂದಲ್ಲಿ ಉತ್ತರ ಪ್ರದೇಶ ಮಾಡದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ಕರ್ನಾಟಕಕ್ಕೆ ಯೋಗಿ ಮಾದರಿಯ ಸಿಎಂ ಬೇಕೆಂಬ ಕಾರ್ಯಕರ್ತರ ಬೇಡಿಕೆ ಕುರಿತ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕೆಲವು ಶಕ್ತಿಗಳು ದುರ್ಘಟನೆಗಳನ್ನು ಸೃಷ್ಟಿ ಮಾಡಲೆಂದೇ ಇರುತ್ತಾರೆ. ಹಿಜಾಬ್ ವಿಚಾರದಲ್ಲಿ ಐವರಿಂದ ಶುರುವಾದ ವಿವಾದ ಇಡೀ ರಾಜ್ಯಕ್ಕೆ ಹಬ್ಬಿ ಬಳಿಕ ಕಾನೂನಿನ ಮುಖಾಂತರ ತಿಳಿ ಹೇಳಿದ ನಂತರ ಸದ್ಯ ಎಲ್ಲರೂ ಕಾನೂನು ಪಾಲಿಸುತ್ತಿದ್ದಾರೆ. ಆಝಾನ್ ವಿಚಾರದಲ್ಲಿಯೂ ಇದೇ ಆಗಿದೆ ಎಂದರು.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರ ಐದು ತಂಡಗಳನ್ನು ಮಾಡಲಾಗಿದೆ. ಕೇರಳಕ್ಕೆ ಪೊಲೀಸರ ತಂಡವನ್ನು ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡುವುದಿಲ್ಲ. ದುಷ್ಟಶಕ್ತಿಗಳ ವಿರುದ್ದ ಹೋರಾಡುವುದಕ್ಕೆ ಸರ್ಕಾರ ಸದಾ ಬದ್ದ ಎಂದು ಅವರು ತಿಳಿಸಿದರು.

ಕಠಿಣ ಕ್ರಮದ ಸರ್ಕಾರ ಎಂದು ಪಕ್ಷದ ಕಾರ್ಯಕರ್ತರೇ ಲೇವಡಿ ಮಾಡುತ್ತಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಹರ್ಷ ಕೊಲೆ ವಿಚಾರದಲ್ಲಿ 24 ಗಂಟೆಯೊಳಗೆ ಆರೋಪಿಗಳ ಬಂಧನವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆಯಾದಾಗಲೂ ಕ್ರಮ ಕ್ಷಿಪ್ರವಾಗಿ ಆಗಿದೆ. ಪಾಂಡವಪುರ ಘಟನೆ ವೇಳೆ ಖುದ್ದಾಗಿ ನಾನೇ ಹೋಗಿ ಕ್ರಮಕ್ಕೆ ವ್ಯವಸ್ಥೆ ಮಾಡಿದ್ದೇನೆ. ರಾಜ್ಯದಲ್ಲಿ ದುಷ್ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಭಯೋತ್ಪಾದಕರನ್ನು ತಿಹಾರ್ ಜೈಲಿಗೆ ಕಳುಹಿಸುವ ಕೆಲಸ ನಿರಂತರ ನಡೆಯುತ್ತಿದೆ ಎಂದರು.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸುವುದು ಕೇಂದ್ರ ಸರ್ಕಾರದ ಕೆಲಸ. ಈ ಸಂಬಂಧ ನಾವು ನೀಡಬೇಕಾದ ಎಲ್ಲಾ ವರದಿಗಳನ್ನು ಕೇಂದ್ರಕ್ಕೆ ನೀಡಿದ್ದೇವೆ. ಶೀಘ್ರ ಕೇಂದ್ರದ ನಿರ್ಣಯ ಹೊರ ಬೀಳಬಹುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

9 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

11 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

14 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

14 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

15 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

15 hours ago