‘ಅಗತ್ಯ ಬಿದ್ದರೆ 50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ದೇಶದಿಂದ ಓಡಿಸಲಾಗುವುದು – ದಿಲೀಪ್‌ ಘೋಷ್‌ -Vishwanews24

ಕೋಲ್ಕತಾ: “50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ಅಗತ್ಯ ಬಿದ್ದರೆ ದೇಶದಿಂದ ಓಡಿಸಲಾಗುವುದು” ಎಂದು ಖರಗ್‌ಪುರದ ಸಂಸದ ದಿಲೀಪ್‌ ಘೋಷ್‌ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ಪರವಾಗಿ ಉತ್ತರ 24 ಪರಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “50 ಲಕ್ಷ ಮುಸ್ಲಿಂ ಒಳನುಸುಳುಕೋರರನ್ನು ಗುರುತಿಸಲಾಗುವುದು, ಅಗತ್ಯ ಬಿದ್ದರೆ ಅವರನ್ನೆಲ್ಲ ಭಾರತದಿಂದ ಓಡಿಸಲಾಗುವುದು. ಮೊದಲಿಗೆ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗುವುದು ಬಳಿಕ ಯಾರೊಬ್ಬರನ್ನು ದೀದಿಗೆ ಸಮಾಧಾನ ಪಡಿಸಲು ಆಗುವುದಿಲ್ಲ” ಎಂದು ಹೇಳಿದರು.

“ಅವರು ನಾಶಪಡಿಸುತ್ತಿರುವ ಸಾರ್ವಜನಿಕ ಆಸ್ತಿ ಅವರ ಅಪ್ಪನಿಗೆ ಸೇರಿದೆ ಎಂದು ಅವರು ತಿಳಿದಿದ್ದಾರ. ಸಾರ್ವಜನಿಕ ಆಸ್ತಿಯು ತೆರಿಗೆದಾರರಿಗೆ ಸೇರಿದ್ದು. ಈ ವಿಚಾರವಾಗಿ ಮಮತಾ ಅವರು ಏನನ್ನೂ ಹೇಳಲಿಲ್ಲ. ಏಕೆಂದರೆ ಅವರು ಅವರ ಮತದಾರರು. ಅಸ್ಸಾಂ ಹಾಗೂ ಉತ್ತರಪ್ರದೇಶದಲ್ಲಿ ನಮ್ಮ ಸರ್ಕಾರ ಇಂತಹವರನ್ನು ನಾಯಿಗಳಂತೆ ಹೊಡೆದುರುಳಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಉತ್ತರ ಪ್ರದೇಶ, ಅಸ್ಸಾಂ ಮತ್ತು ಕರ್ನಾಟಕ ಸರ್ಕಾರಗಳು ಇಂತಹ ರಾಷ್ಟ್ರ ವಿರೋಧಿಗಳ ಮೇಲೆ ಗುಂಡು ಹಾರಿಸುವ ಮೂಲಕ ಸರಿಯಾದ ಕಾರ್ಯವನ್ನೇ ಮಾಡಿವೆ “ಎಂದರು.

“ಸಾರ್ವಜನಿಕ ಆಸ್ತಿಗಳನ್ನು ಯಾರು ಧ್ವಂಸ ಮಾಡುತ್ತಾರೋ ಅಂತವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ನಾನು ಭಾಷಣದಲ್ಲಿ ಹೇಳಿದ್ದೆ. ವಿರೋಧ ಪಕ್ಷಗಳು ಈ ಬಗ್ಗೆ ಸಾಕಷ್ಟು ಗೊಂದಲಗಳನ್ನು ಸೃಷ್ಟಿ ಮಾಡಿದ್ದಾರೆ. ನಾನು ಈಗಲೂ ಅದನ್ನೇ ಹೇಳುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದರು.

“ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡುವ ಈ ಒಳನುಸುಳುಕೋರರನ್ನು ಏನು ಮಾಡಬೇಕು? ಅವರಿಗೆ ಪ್ರಸಾದ ನೀಡಬೇಕೇ? ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡಿದವರನ್ನು ಗುರುತಿಸಲಾಗುತ್ತದೆ. ಮೊದಲು ಅವರಿಗೆ ಗುಂಡಿಕ್ಕಿ ಬಳಿಕ ಬಾಂಬ್‌ ಸ್ಫೋಟಿಸಲಾಗುತ್ತದೆ. ಯಾರನ್ನೂ ಬಿಡಲಾಗುವುದಿಲ್ಲ” ಎಂದು ಹೇಳಿದರು.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago