‘ಅಗತ್ಯ ಬಿದ್ದರೆ 50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ದೇಶದಿಂದ ಓಡಿಸಲಾಗುವುದು – ದಿಲೀಪ್‌ ಘೋಷ್‌ -Vishwanews24

ಕೋಲ್ಕತಾ: “50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ಅಗತ್ಯ ಬಿದ್ದರೆ ದೇಶದಿಂದ ಓಡಿಸಲಾಗುವುದು” ಎಂದು ಖರಗ್‌ಪುರದ ಸಂಸದ ದಿಲೀಪ್‌ ಘೋಷ್‌ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ಪರವಾಗಿ ಉತ್ತರ 24 ಪರಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “50 ಲಕ್ಷ ಮುಸ್ಲಿಂ ಒಳನುಸುಳುಕೋರರನ್ನು ಗುರುತಿಸಲಾಗುವುದು, ಅಗತ್ಯ ಬಿದ್ದರೆ ಅವರನ್ನೆಲ್ಲ ಭಾರತದಿಂದ ಓಡಿಸಲಾಗುವುದು. ಮೊದಲಿಗೆ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗುವುದು ಬಳಿಕ ಯಾರೊಬ್ಬರನ್ನು ದೀದಿಗೆ ಸಮಾಧಾನ ಪಡಿಸಲು ಆಗುವುದಿಲ್ಲ” ಎಂದು ಹೇಳಿದರು.

“ಅವರು ನಾಶಪಡಿಸುತ್ತಿರುವ ಸಾರ್ವಜನಿಕ ಆಸ್ತಿ ಅವರ ಅಪ್ಪನಿಗೆ ಸೇರಿದೆ ಎಂದು ಅವರು ತಿಳಿದಿದ್ದಾರ. ಸಾರ್ವಜನಿಕ ಆಸ್ತಿಯು ತೆರಿಗೆದಾರರಿಗೆ ಸೇರಿದ್ದು. ಈ ವಿಚಾರವಾಗಿ ಮಮತಾ ಅವರು ಏನನ್ನೂ ಹೇಳಲಿಲ್ಲ. ಏಕೆಂದರೆ ಅವರು ಅವರ ಮತದಾರರು. ಅಸ್ಸಾಂ ಹಾಗೂ ಉತ್ತರಪ್ರದೇಶದಲ್ಲಿ ನಮ್ಮ ಸರ್ಕಾರ ಇಂತಹವರನ್ನು ನಾಯಿಗಳಂತೆ ಹೊಡೆದುರುಳಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಉತ್ತರ ಪ್ರದೇಶ, ಅಸ್ಸಾಂ ಮತ್ತು ಕರ್ನಾಟಕ ಸರ್ಕಾರಗಳು ಇಂತಹ ರಾಷ್ಟ್ರ ವಿರೋಧಿಗಳ ಮೇಲೆ ಗುಂಡು ಹಾರಿಸುವ ಮೂಲಕ ಸರಿಯಾದ ಕಾರ್ಯವನ್ನೇ ಮಾಡಿವೆ “ಎಂದರು.

“ಸಾರ್ವಜನಿಕ ಆಸ್ತಿಗಳನ್ನು ಯಾರು ಧ್ವಂಸ ಮಾಡುತ್ತಾರೋ ಅಂತವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ನಾನು ಭಾಷಣದಲ್ಲಿ ಹೇಳಿದ್ದೆ. ವಿರೋಧ ಪಕ್ಷಗಳು ಈ ಬಗ್ಗೆ ಸಾಕಷ್ಟು ಗೊಂದಲಗಳನ್ನು ಸೃಷ್ಟಿ ಮಾಡಿದ್ದಾರೆ. ನಾನು ಈಗಲೂ ಅದನ್ನೇ ಹೇಳುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದರು.

“ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡುವ ಈ ಒಳನುಸುಳುಕೋರರನ್ನು ಏನು ಮಾಡಬೇಕು? ಅವರಿಗೆ ಪ್ರಸಾದ ನೀಡಬೇಕೇ? ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡಿದವರನ್ನು ಗುರುತಿಸಲಾಗುತ್ತದೆ. ಮೊದಲು ಅವರಿಗೆ ಗುಂಡಿಕ್ಕಿ ಬಳಿಕ ಬಾಂಬ್‌ ಸ್ಫೋಟಿಸಲಾಗುತ್ತದೆ. ಯಾರನ್ನೂ ಬಿಡಲಾಗುವುದಿಲ್ಲ” ಎಂದು ಹೇಳಿದರು.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

5 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago