ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಕಚೇರಿ ಮುಂದೆ ಸಿಲಿಂಡರ್ ಗಳನ್ನು ಹಿಡಿದು ಕಾಂಗ್ರೆಸ್ ಪ್ರತಿಭಟನೆ – Vishwanews24

Featured, ರಾಜ್ಯ ನ್ಯೂಸ್

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಕಚೇರಿ ಮುಂದೆ ಸಿಲಿಂಡರ್ ಗಳನ್ನು ಹಿಡಿದು ಕಾಂಗ್ರೆಸ್ ಪ್ರತಿಭಟನೆ – Vishwanews24

ಬೆಂಗಳೂರು: ದೇಶಾದ್ಯಂತ ತೈಲಬೆಲೆ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ, ಇಂದು ಕೆಪಿಸಿಸಿ ಕಚೇರಿಯ  ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಸಣ್ಣ ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತು, ಪ್ರತಿಭಟನೆ ನಡೆಸಿ ಗಮನ ಸೆಳೆಯದರು.

ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ಆರಂಭಗೊಂಡಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಕಾಂಗ್ರೆಸ್ ನಾಯಕರು, ಸಿಲಿಂಡರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಎಐಸಿಸಿಯಿಂದ ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಚಾಲನೆಗೆ, ಕರ್ನಾಟಕದಲ್ಲೂ ಅಭಿಯಾನ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿ.ಎಂ.ಇಬ್ರಾಹಿಂ – Vishwanews24

ಬೈಕ್ ಮೇಲೆ ಮೋದಿ ಕುಳಿತಿರುವ ಪ್ರತಿಕೃತಿಗೆ ಗಂಟೆ ಬಡಿದು ಪೂಜೆ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬೈಕ್ ಮೇಲೆ ಮೋದಿ ಮುಖವಾಡ ಧರಿಸಿ ಕುಳಿತಿರುವ ವ್ಯಕ್ತಿಯ ಬೆನ್ನು ತಟ್ಟಿದ್ದು ಗಮನ ಸೆಳೆಯಿತು. ಅಲ್ಲದೇ ತಲೆ ಮೇಲೆ ಸಣ್ಣ ಸಿಲಿಂಡರ್ ಹೊತ್ತು ಫೋಸ್ ಕೊಟ್ಟಿದ್ದು ಕಂಡು ಬಂತು.

ಈ ವೇಳೆ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಇಳಿದಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ದಿನಾ ಪಿಕ್ ಪಾಕೆಟ್ ಆಗ್ತಿದೆ. ಗ್ಯಾಸ್ ಸಿಲಿಂಡರ್, ಬೈಕ್, ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ ಎಂದರು.

ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಶ್ರೀ ಸುನಿಲ್ ಕುಮಾರ್ ಸೂಚನೆ – Vishwanews24

Leave a Reply